Breaking News

ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ

Spread the love

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ 3 ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ.

 

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ಬೇರೆ ಎದುರಾಗಿದೆ. ಸಾಮೂಹಿಕ ಗಣೇಶ ಆಚರಣೆ ಬಗ್ಗೆ ಸರ್ಕಾರ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ರಾಜ್ಯದ ಜನ ಸಾಮೂಹಿಕವಾಗಿ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುಮತಿ ಇದೆಯಾ? ಇಲ್ಲವಾ ಎನ್ನುವ ಗೊಂದಲದಲ್ಲಿದ್ದಾರೆ. ಹೀಗಾಗಿ ಇಂದು ಗಣೇಶೋತ್ಸವ ಆಚರಣೆಗೆ ಕೆಲ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯೂ ಇದೆ.

ಸಾಮೂಹಿಕ ಗಣೇಶ ಆಚರಣೆ ವಿಚಾರವಾಗಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದಾರೆ.ಇಂದು ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 4 ಗಂಟೆಗೆ ಸಭೆ ನಡೆಯಲಿದ್ದು, ಸಿಎಂ, ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಆರೋಗ್ಯ ಸಚಿವರು, ಬಿಬಿಎಂಪಿ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರು ಕೂಡ ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ