Breaking News

ಬಿಜೆಪಿಯವರು ಕ್ಷಮಾ ಯಾತ್ರೆ ಮಾಡಲಿ: ಸಲೀಂ ಅಹ್ಮದ್ ಟೀಕೆ

Spread the love

ಕಲಬುರ್ಗಿ: ‘ನಾಲ್ವರು ಕೇಂದ್ರ ಸಚಿವರು ಈಚೆಗೆ ಜನಾಶೀರ್ವಾದ ಯಾತ್ರೆ ನಡೆಸಿದರು. ಕೋವಿಡ್‌ ಸಂದರ್ಭದಲ್ಲಿ ಸಮರ್ಪಕವಾಗಿ ಬೆಡ್‌, ಆಮ್ಲಜನಕ, ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡದೇ ವಿಫಲರಾಗಿದ್ದಕ್ಕೆ ಜನರ ಕ್ಷಮೆ ಕೇಳಲು ಕ್ಷಮಾ ಯಾತ್ರೆ ಮಾಡಬೇಕಿತ್ತು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟೀಕಿಸಿದರು.

‘ರಾಜ್ಯದಲ್ಲಿ ಜನರು ಕೋವಿಡ್‌ನಿಂದ ಸಂಕಷ್ಟದಲ್ಲಿದ್ದು, ಬೆಲೆ ಏರಿಕೆಯಿಂದಲೂ ತತ್ತರಿಸಿದ್ದಾರೆ. ಅಚ್ಛೆ ದಿನ್ ಭರವಸೆ ನೀಡಿ ಅತ್ಯಂತ ಕೆಟ್ಟ ದಿನಗಳಲ್ಲಿ ನರಳುವಂತೆ ಮಾಡಿದ್ದಕ್ಕೆ, ₹ 13 ಸಾವಿರ ಕೋಟಿ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡಿಸಲು ಆಗದಿದ್ದುದಕ್ಕೆ ಸಚಿವರು ಕ್ಷಮೆ ಯಾತ್ರೆ ನಡೆಸಬೇಕಿತ್ತು’ ಎಂದು ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ‘ಕೋವಿಡ್ ವೇಳೆ ರಾಜ್ಯ ಸರ್ಕಾರ ₹ 2 ಸಾವಿರ ಕೋಟಿಯಷ್ಟು ಭ್ರಷ್ಟಾಚಾರ ಎಸಗಿದೆ. ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ ರಾಜ್ಯ ಸರ್ಕಾರವು ತಲಾ ₹ 5 ಲಕ್ಷ ಪರಿಹಾರ ನೀಡಬೇಕು’ ಎಂದೂ ಒತ್ತಾಯಿಸಿದರು.

‘ಯಾದಗಿರಿಯಲ್ಲಿ ಕೇಂದ್ರ ಸಚಿವರ ಸ್ವಾಗತದ ವೇಳೆ ಗಾಳಿಯಲ್ಲಿ ಗುಂಡುಹಾರಿಸಿದ್ದು ಉತ್ತರ ಪ್ರದೇಶ ಮತ್ತು ಬಿಹಾರದ ಸಂಸ್ಕೃತಿಯಾಗಿದ್ದು, ಅದನ್ನು ಬಿಜೆಪಿ ರಾಜ್ಯದಲ್ಲಿ ಪರಿಚಯಿಸುತ್ತಿದೆ. ಇದು ನಾಚಿಕೆಗೇಡು’ ಎಂದು ಹೇಳಿದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ