Breaking News

ಹುಣಸೂರು: ಮರದ ದಿಮ್ಮಿ ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಡಿಕ್ಕಿ, ಬಸ್‌ ಚಾಲಕನಿಗೆ ಗಂಭೀರ ಗಾಯ

Spread the love

ಹುಣಸೂರು: ರಸ್ತೆ ಪಕ್ಕದಲ್ಲಿ ನಿಂತಿದ್ದ ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದ್ದು, ಬಸ್‌ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಲ್ಬೆಟ್ಟ ಬಳಿ ನಡೆದಿದೆ.

ಬಸ್‌ ಚಾಲಕ ಎಚ್‌.ಬಿ.ಮಹದೇವ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿ ಹುಣಸೂರಿನ ಕಡೆ ಹೊರಟಿತ್ತು. ಈ ವೇಳೆ ಕಲ್ಬೆಟ್ಟದ ಬಳಿ ನಿಂತಿತ್ತು. ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ, ಬಸ್‌ ಮುಂಭಾಗ ಜಖಂಗೊಂಡಿದೆ.

ಹುಣಸೂರು ಗ್ರಾಮಾಂತರ ಪೋಲೀಸರು ಲಾರಿ ಮತ್ತು ಸಾರಿಗೆ ಬಸ್‌ ಅನ್ನು ವಶಕ್ಕೆ ಪಡೆದು ಕ್ರಮಜರುಗಿಸಿದ್ದಾರೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ