Breaking News

ಮೈಸೂರು ಅತ್ಯಾಚಾರ ಪ್ರಕರಣದ ತನಿಖಾ ವಿಧಾನಕ್ಕೆ ಆಕ್ಷೇಪ

Spread the love

ಮೈಸೂರು: ಪ್ರಕರಣವನ್ನು ಪೊಲೀಸರು ನಿರ್ವಹಿಸಿದ ರೀತಿಗೆ ಆಕ್ಷೇಪ ವ್ಯಕ್ತವಾಗಿದೆ. ದೆಹಲಿ ಪ್ರಕರಣದಷ್ಟು ಗಂಭೀರವಾಗಿ ನಿರ್ವಹಿಸಿಲ್ಲ ಎಂಬ ಅಸಮಾಧಾನ ಕೇಳಿಬಂದಿದೆ.

 

‘ತನಿಖೆ ಪೂರ್ಣಗೊಳ್ಳುವ ಮುನ್ನವೇ ಆರೋಪಿಗಳ ಭಾವಚಿತ್ರ, ಮತ್ತು ಹೆಸರುಗಳು ಬಹಿರಂಗಗೊಂಡಿರುವುದು ವರ್ಮಾ ಆಯೋಗದ ವರದಿಗೆ ವಿರುದ್ಧ’ ಎಂದು ವಕೀಲರಾದ ಮಂಜುಳಾ ಮಾನಸ ಆಕ್ಷೇಪಿಸಿದ್ದಾರೆ. ಬೆಂಗಳೂರಿನ ವಕೀಲ ಕೆ.ವಿ.ಧನಂಜಯ್ ಅವರೂ ಟ್ವಿಟರ್‌ನಲ್ಲಿ ಆಕ್ಷೇಪಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ಸೂದ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಗಳ ಹೆಸರು, ಚಿತ್ರ ಬಹಿರಂಗಪಡಿಸಲು ನಿರಾಕರಿಸಿದ್ದರು. ಸಂತ್ರಸ್ತೆಯ ಇರುವಿಕೆ, ಪ್ರಯಾಣದ ವಿವರಗಳನ್ನು ಗೋಪ್ಯವಾಗಿಡಲು ಮನವಿ ಮಾಡಿದ್ದರೂ ವಿವರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗಗೊಂಡಿವೆ.


Spread the love

About Laxminews 24x7

Check Also

ಮಂಗಳೂರು ಏರ್ಪೋರ್ಟ್‌ನಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ

Spread the loveಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ