Breaking News

ನ.1ರಿಂದ ಆಡಳಿತ ಸುಧಾರಣೆ ಜಾರಿ: ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು: ಟಿ.ಎಂ. ವಿಜಯ ಭಾಸ್ಕರ್‌ ನೇತೃತ್ವದ ಆಡಳಿತ ಸುಧಾರಣಾ ಆಯೋಗದ ಮೊದಲ ವರದಿಯಲ್ಲಿನ ಶಿಫಾರಸುಗಳನ್ನು ನವೆಂಬರ್‌ 1ರಿಂದ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ಸಲಹಾ ಸಮಿತಿ ರಚಿಸಲಾಗುವುದು. ಸಮಿತಿಯ ಸಲಹೆಗಳ ಆಧಾರದಲ್ಲಿ ನ.1ರಿಂದಲೇ ಅನುಷ್ಠಾನಕ್ಕೆ ಚಾಲನೆ ನೀಡಲಾಗುವುದು’ ಎಂದರು.

ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಹಿರಿಯ ಅಧಿಕಾರಿಗಳನ್ನು ನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯ ಉದ್ಘಾಟನೆ

Spread the love ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ