Breaking News

ಮೈಸೂರು ಅತ್ಯಾಚಾರ ಪ್ರಕರಣ: ಪೊಲೀಸರನ್ನೇ ಇರಿಯಲು ಮುನ್ನುಗ್ಗಿದ್ದ ಆರೋಪಿ!

Spread the love

ಮೈಸೂರು: ಸಾಮೂಹಿಕ ಅತ್ಯಾಚಾರದ ಆರೋಪಿಯು ಚಾಕುವಿನಿಂದ ಪೊಲೀಸರನ್ನೇ ಇರಿಯಲು ಮುನ್ನುಗ್ಗಿದ್ದ!

ತಮಿಳುನಾಡಿನ ತಿರ್‌ಪೂರ್‌ ಜಿಲ್ಲೆಯ ಮನೆಯಲ್ಲಿದ್ದ ಆತನನ್ನು ಬಂಧಿಸಲು ತೆರಳಿದ್ದ ಪೊಲೀಸರು ಸ್ವಲ್ಪ ಯಾಮಾರಿದ್ದರೂ ಮಾರಣಾಂತಿಕ ಹಲ್ಲೆಗೆ ಗುರಿಯಾಗುತ್ತಿದ್ದ ಅಪಾಯಕಾರಿ ಸನ್ನಿವೇಶವೂ ನಿರ್ಮಾಣವಾಗಿತ್ತು.

 

‘ಖಚಿತ ಮಾಹಿತಿ ಮೇರೆಗೆ ಆ.28ರಂದು ರಾತ್ರಿ 1 ಗಂಟೆಯಲ್ಲಿ ಕೇವೂರು ಗ್ರಾಮದ ತೋಟವೊಂದರಲ್ಲಿ ‌ಆರೋಪಿಯ ಮನೆ ಸೇರಿದಂತೆ ಅಲ್ಲಿದ್ದ 10ರಿಂದ 12 ಮನೆಗಳ ಶೋಧ ಕಾರ್ಯ ನಡೆದಿತ್ತು. ಆ ವೇಳೆಯಲ್ಲೇ ಆರೋಪಿ ಕುಟುಂಬದವರ ಜತೆ ಇರದೆ ಪ್ರತ್ಯೇಕವಾದ ಚಿಕ್ಕ ಮನೆಯೊಂದರಲ್ಲಿ ಮಲಗಿದ್ದ. ಹಲವು ಸಲ ಬಾಗಿಲು ಬಡಿದ ಮೇಲೆ ಎಚ್ಚರಗೊಂಡ ಆತ ಚಾಕು ಹಿಡಿದುಕೊಂಡೇ ಬಾಗಿಲು ತೆರೆದು ಇರಿಯಲು ಮುನ್ನುಗ್ಗಿದ’ ಎಂದು ತನಿಖಾ ತಂಡದ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ಮಂಗಳವಾರ ತಿಳಿಸಿದರು.

‘ಎರಡು ಬಾರಿ ಆತ ನಮ್ಮ ಮೇಲೆ ಎರಗಲು ಪ್ರಯತ್ನಿಸಿದ. ಅದನ್ನು ನಿರೀಕ್ಷಿಸಿದ್ದ ನಾವು ಕೂಡಲೇ ಪಕ್ಕಕ್ಕೆ ಸರಿದು ಅವನನ್ನು ಹಿಡಿದೆವು. ಆತ ಸದಾ ಕಾಲ ಚಾಕುವನ್ನು ತನ್ನ ಮಗ್ಗಲಿರಿಸಿಕೊಂಡೇ ಮಲಗುತ್ತಿದ್ದ ಎಂಬ ಸಂಗತಿಯೂ ವಿಚಾರಣೆಯಲ್ಲಿ ಗೊತ್ತಾಯಿತು’ ಎಂದರು. ಎಸಿಪಿ ಶಿವಶಂಕರ್, ಇನ್‌ಸ್ಪೆಕ್ಟರ್‌ಗಳಾದ ಮಹದೇವಸ್ವಾಮಿ, ಶ್ರೀಕಾಂತ್ ಹಾಗೂ ಪ್ರಕಾಶ್ ನೇತೃತ್ವದ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿದ್ದವು.

 

ಮತ್ತೊಬ್ಬ ಆರೋಪಿ ಬಂಧನ?: ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದ್ದು, ಅಧಿಕಾರಿಗಳು ಖಚಿತಪಡಿಸಿಲ್ಲ. ಇದುವರೆಗೆ ಐವರನ್ನು ಬಂಧಿಸಲಾಗಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೆ. 1ರಂದು ನಗರಕ್ಕೆ ಭೇಟಿ ನೀಡಲಿದ್ದು, ಪ್ರಕರಣ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ