Breaking News

ಶಾಲೆಗಳು ರೀ ಓಪನ್​​..! ಆದ್ರೆ ಬಸ್​ಗಳೇ ಇಲ್ಲ.. ನಿತ್ಯ ನಡೆಯುತ್ತಲೇ ಹೋಗಬೇಕಾಗಿದೆ ವಿದ್ಯಾರ್ಥಿಗಳು

Spread the love

ಗದಗ : ಶಿಕ್ಷಣ ಇಲಾಖೆಯೇನೋ ಹಲವಾರು ಅಡೆತಡೆಗಳ ನಡುವೆಯೂ ಶಾಲೆಗಳನ್ನು ಆರಂಭಿಸಿದೆ. ಆದರೆ ಇಲ್ಲೊಂದು ಶಾಲೆಯ ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಹೋಗಬೇಕಾದ್ರೆ ನಿತ್ಯವು 4 ಕಿ.ಮೀ ನಷ್ಟು ದೂರ ನಡೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದ್ದು, ಶಾಲಾ ಸಮಯಕ್ಕೆ ಸರಿಯಾದ ಬಸ್​ ಇಲ್ಲದೆ ವೇದನೆ ಅನುಭವಿಸುತ್ತಿದ್ದಾರೆ.

 

 

ಹೌದು ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಸ್ಥಗಿತಗೊಂಡ ಬಸ್ ಪುನರಾರಂಭವಾಗದ ಪರಿಣಾಮ, ವಿದ್ಯಾರ್ಥಿಗಳು ದಿನನಿತ್ಯ ಶಾಲೆಗೆ 4 ಕಿ.ಮೀ ನಡೆದುಕೊಂಡು ಹೋಗುವ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಹಾಗೂ ವೆಂಕಟಾಪುರ ಗ್ರಾಮದ ವಿದ್ಯಾರ್ಥಿಗಳು, ಪಕ್ಕದ ಯಕ್ಲಾಸಪುರ ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಹೋಗ ಬೇಕಾದರೆ ನಡೆದುಕೊಂಡೆ ಹೋಗುವ ಸ್ಥೀತಿ ನಿರ್ಮಾಣವಾಗಿದ್ದು ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ.

ಕೋವಿಡ್​ ಕಾಲದಲ್ಲಿ ಡಂಬಳ, ಮೇವುಂಡಿ, ಹೈತಾಪುರ ಮಾರ್ಗವಾಗಿ ಯಕ್ಲಾಸಪುರಕ್ಕೆ ಸಂಚರಿಸುವ ಬಸ್​ನ್ನು ಸ್ಥಗಿತಗೊಳಿಸಲಾಗಿತ್ತು. ಬಳಿಕ ಇಂದಿನವರೆಗೂ ಈ ಮಾರ್ಗದ ಬಸ್ಸನ್ನು ಪುನರಾರಂಭಿಸಿಲ್ಲ ಪರಿಣಾಮ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಕಾಲ್ನಡಿಗೆಯಲ್ಲಿಯೇ ಶಾಲೆಗೆ ಹೊರಟಿದ್ದಾರೆ.

ಸಾರಿಗೆ ಸಂಸ್ಥೆಯ ಬಸ್ ಕೊರತೆ, ಮತ್ತು ಶಾಲೆ ಸಮಯಕ್ಕೆ ಸರಿಯಾಗಿ ಬಸ್​ ಬಾರದ ಕಾರಣ ಗರಂ ಆದ ಪೋಷಕರು, ವಿದ್ಯಾರ್ಥಿಗಳು ಸಮರ್ಪಕವಾಗಿ ಬಸ್ ಬಿಡುವಂತೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ,

Spread the love ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ, ಜನ ಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದ್ರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ