Breaking News

ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಮಹಿಳೆಯೊಬ್ಬಳ ಆತ್ಮಹತ್ಯೆ

Spread the love

ಹುಡುಗಿಯರಿಗೆ ಪಾನಿಪುರಿ ಅಂದ್ರೆ ಪಂಚಪ್ರಾಣ. ಮಹಿಳೆಯೊಬ್ಬಳು ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪುಣೆಯ ನಿವಾಸಿಯಾಗಿರುವ ಪ್ರತೀಕ್ಷಾ ಸರ್ವಾಡೆ ೨೦೧೯ ರಲ್ಲಿ ಗಹಿನಿನಾಥ್‌ ಸರ್ವಾಡೆ ಎಂಬವರನ್ನು ಮದುವೆಯಾಗಿದ್ದರು. ಗಹಿನಿನಾಥ್‌ ಸರ್ವಾಡೆ ಕೆಲಸದಿಂದ ಬರುವಾಗ ಪತ್ನಿಗೆ ತಿಳಿಸದೇ ಪಾನಿಪೂರಿಯನ್ನು ತಂದಿದ್ದರು. ಅಡುಗೆ ಮಾಡಿಟ್ಟಿದ್ದ ಪತ್ನಿ ಪ್ರತೀಕ್ಷಾ ಇದೇ ಕಾರಣಕ್ಕೆ ಕೋಪ ಮಾಡಿಕೊಂಡಿದ್ದಾಳೆ.

ಮರುದಿನ ಪತಿ ಮನೆಯಲ್ಲಿ ಇಲ್ಲದ ವೇಳೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾಳೆ. ಪ್ರತೀಕ್ಷಾಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ದಂಪತಿಗಳಿಗೆ ೧೮ ತಿಂಗಳ ಮಗು ಇದೆ. ಇದೀಗ ಪ್ರತೀಕ್ಷಾಆತ್ಮಹತ್ಯೆಗೆ ಪತಿಯೇ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ. ಅಲ್ಲದೇ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮಂಗಳೂರು ಏರ್ಪೋರ್ಟ್‌ನಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ

Spread the loveಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ