Breaking News

E-KYC : ಪಡಿತರ ಚೀಟಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

Spread the love

ಕಲಬುರಗಿ : ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇ-ಕೆವೈಸಿ (ಜೀವ ಮಾಪಕ/ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಕೊಳ್ಳಬೇಕಾಗಿದೆ. ಆದ್ದರಿಂದ ಜಿಲ್ಲೆಯ ಇನ್ನುಳಿದ ಪಡಿತರ ಚೀಟಿದಾರರು 2021ರ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಬೇಕೆಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

 

ಕಲಬುರಗಿ ಜಿಲ್ಲೆಯ 983 ನ್ಯಾಯಬೆಲೆ ಅಂಗಡಿಗಳಲ್ಲಿನ ಪಿಒಎಸ್ ವ್ಯವಸ್ಥೆಯ ಮೂಲಕ ಉಚಿತವಾಗಿ ಇ-ಕೆವೈಸಿ ಮಾಡುವ ಕಾರ್ಯವು ಪ್ರಗತಿಯಲ್ಲಿದೆ. ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅತೀ ಅವಶ್ಯವಾಗಿದೆ. ಜಿಲ್ಲೆಯಲ್ಲಿ ಈವರೆಗೆ ಪ್ರತಿಶತ 65 ರಷ್ಟು ಆದ್ಯತಾ (ಬಿ.ಪಿ.ಎಲ್.) ಪಡಿತರ ಚೀಟಿದಾರರ ಇ-ಕೆವೈಸಿ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ