Breaking News

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ.

Spread the love

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಡುವುದಿದ್ದರೆ ಬಿಡಲಿ, ಇನ್ನು ಮುಂದೆ ಮನೆ ಹಂಚಿಕೆ ಮಾಡುವಂತೆ ಕೇಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದ ಅವರು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಮನೆ ಹಂಚಿಕೆ ಮಾಡಿಲ್ಲ. ಈ ಬಗ್ಗೆ ಹಲವು ಬಾರಿ ಪತ್ರ ಬರೆದಿದ್ದೇನೆ. ಇನ್ನೊಂದು ಸಲ ಕೊನೆಯದಾಗಿ ಪತ್ರ ಬರೆಯುತ್ತೇನೆ. ಮನೆ ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ, ನಾನೇನು ಬಿಕ್ಷೆ ಬಿಡುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.

ಶಾಲೆಗಳನ್ನು ಆರಂಭಿಸಬೇಕೆಂದು ನಾನು ಎಂದು ಸಲಹೆ ನೀಡಿದ್ದೆ. 1 ರಿಂದ 6 ನೇ ತರಗತಿ ಕೂಡ ಆರಂಭಿಸಬೇಕು ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ