Breaking News

ದೇವಸ್ಥಾನಗಳಲ್ಲಿ‌ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆ: ಕಮಲ್‌ಪಂತ್

Spread the love

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಸಾರ್ವಜನಿಕ ರಸ್ತೆಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ ಎಂದು‌ ಪೊಲೀಸ್ ‌ಕಮಿಷನರ್ ಕಮಲ್ ಪಂತ್ ಹೇಳಿದರು.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯ‌ ಸರ್ಕಾರದ ನಿಯಮಗಳನ್ವಯ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಉಳಿದಂತೆ‌, ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿವೆ. ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ದೇವಸ್ಥಾನದಲ್ಲಿ‌ ಮೂರ್ತಿ ಪ್ರತಿಷ್ಠಾಪನೆಗೂ‌ ಮುನ್ನ ಪೊಲೀಸರು ಹಾಗೂ‌ ಬಿಬಿಎಂಪಿ ಅವರಿಂದ ಅನುಮತಿ‌ ಪಡೆಯಬೇಕು ಎಂದೂ‌ ಹೇಳಿದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ