Breaking News
Home / ರಾಜಕೀಯ / ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಬೊಮ್ಮಾಯಿ

ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಬೊಮ್ಮಾಯಿ

Spread the love

ಬೆಂಗಳೂರು: ರಾಜ್ಯದ ಎಲ್ಲ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್ ಟಿಸಿ) 60ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಾಲ್ಕು ಸಾರಿಗೆ ನಿಗಮಗಳ 60 ಚಾಲಕರಿಗೆ ಅಪಘಾತ ರಹಿತ ಚಾಲನೆಗಾಗಿ ಮುಖ್ಯಮಂತ್ರಿಯವರ ಚಿನ್ನದ ಪದಕ ಪ್ರದಾನ ಮಾಡಿ ಅವರು ಮಾತನಾಡಿದರು.

ಸಾರಿಗೆ ನಿಗಮಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಗೆ ಐದು ತಿಂಗಳ ಕಾಲಾವಕಾಶ ನೀಡಲಾಗುವುದು‌. ವರದಿಯ ಆಧಾರದಲ್ಲಿ ಮುಂದಿನ ಬಜೆಟ್ ನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು.

ಸರ್ಕಾರದ ಸಾರಿಗೆ ನಿಗಮಗಳಿಗೆ ಎಲ್ಲ ಅವಧಿಯಲ್ಲೂ ಸಹಕಾರ ದೊರಕಿದೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ₹2,300 ಕೋಟಿ ನೀಡಲಾಗಿತ್ತು. ತಾವು ಅಧಿಕಾರ ಸ್ವೀಕರಿಸಿದ ಬಳಿಕ ₹ 130 ಕೋಟಿ ನೀಡಲಾಗಿದೆ ಎಂದರು.

ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ನೌಕರರು ತಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ವಿನಿಯೋಗಿಸಿ ಸಂಸ್ಥೆಗಳನ್ನು ಲಾಭದ ಹಾದಿಗೆ ತರಬೇಕು. ಇದಕ್ಕೆ ಅಗತ್ಯವಿರುವ ಎಲ್ಲ ಸಹಕಾರಗಳನ್ನೂ ಸರ್ಕಾರ ನೀಡಲಿದೆ ಎಂದರು.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ