Breaking News

ಎಂಎಲ್‍ಸಿ ಪುಟ್ಟಣ ಅವರಿಗೂ ಕೊರೊನಾ ಸೋಂಕು

Spread the love

ಬೆಂಗಳೂರು: ಎಂಎಲ್‍ಸಿ ಪುಟ್ಟಣ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ಕುರಿತು ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಪುಟ್ಟಣ ಅವರು ನಿಮ್ಮ ಆಶೀರ್ವಾದದಿಂದ ಬೇಗ ಗುಣಮಖನಾಗಿ ಬರುತ್ತೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಜ್ವರ ಇದ್ದುದರಿಂದ, ಕ್ವಾರಂಟೈನ್ ನಲ್ಲಿ ಇದ್ದೆ. ಗುರುವಾರ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ತಪಾಸಣೆಯ ವರದಿ ಪಾಸಿಟಿವ್ ಬಂದಿರುವುದರಿಂದ ಶುಕ್ರವಾರ ಅಂದರೆ ನಿನ್ನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಆಶೀರ್ವಾದದಿಂದ ಬೇಗ ಗುಣಮುಖನಾಗಿ ಬರುತ್ತೆನೆ ಎಂದು ನಂಬಿದ್ದೆನೆ. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ನೀವು ಮತ್ತು ನಿಮ್ಮ ಕುಟುಂಬದವರು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 994 ಮಂದಿಗೆ ಸೋಂಕು ತಗುಲಿದ್ದು, ಭಯಬೀತರಾದ ಜನ ಸಿಲಿಕಾನ್ ಸಿಟಿಯನ್ನ ತೊರೆಯುತ್ತಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ