Breaking News

ಮಕ್ಕಳಿಂದಲೇ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ.. ಹೆತ್ತ ತಪ್ಪಿಗೆ ಕಣ್ಣೀರಿಟ್ಟ ಅಪ್ಪ

Spread the love

ಹಾವೇರಿ: ವೃದ್ಧ ತಂದೆಯನ್ನ ನಡು ಬೀದಿಯಲ್ಲಿ ಎಳೆದಾಡಿ ಮಕ್ಕಳಿಬ್ಬರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ.

ಯಲ್ಲಪ್ಪ ವಡ್ಡರ ಎಂಬ 70 ವರ್ಷದ ವೃದ್ಧನ ಮೇಲೆ ಮಕ್ಕಳು ಹಲ್ಲೆ ನಡೆಸಿದ್ದಾರೆ. ಮಕ್ಕಳಾದ ಆನಂದ, ಜಗದೀಶ ಎಂಬುವರಿಂದ ಮನಬಂದಂತೆ ಹಲ್ಲೆ ನಡೆದಿದ್ದು.. ಒಬ್ಬರಾದ ಮೇಲೆ ಒಬ್ಬರು ಬಂದು ಕಾಲಲ್ಲಿ ಒದ್ದಿದ್ದಾರೆ.

ಹಡೆದ ತಪ್ಪಿಗಾಗಿ ತಂದೆ ರಸ್ತೆಯಲ್ಲಿ ಕಣ್ಣೀರು ಹಾಕಿದ್ದಾರೆ. ನಂತರ ಪ್ರಜ್ಞಾಹೀನನಾಗಿ ನರಳುತ್ತಾ ದಾರಿಯಲ್ಲಿ ಬಿದ್ದಿದ್ದ ವೃದ್ದ ವ್ಯಕ್ತಿಯನ್ನ ಹಾವೇರಿ ಜಿಲ್ಲಾಸ್ಪತ್ರೆಗೆ ಗ್ರಾಮಸ್ಥರು ಸೇರಿಸಿದ್ದಾರೆ. ಯಾವ ಕಾರಣಕ್ಕಾಗಿ ಮಕ್ಕಳು ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆಂಬ ಮಾಹಿತಿ ತಿಳಿದುಬಂದಿಲ್ಲ. ಕಾಗಿನೆಲೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ