ನವದೆಹಲಿ, ಆ.13- ಮೆದುಳು ಸೂಕ್ಷ್ಮ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣವ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ವಿಷಮವಾಗಿದ್ದು, ಡೀಪ್ ಕೋಮಾ (ತೀವ್ರ ಪ್ರಜ್ಞಾಶೂನ್ಯ ಸ್ಥಿತಿ) ತಲುಪಿಸಿದ್ದಾರೆ.
ಮೆದುಳಿನ ಸೂಕ್ಷ್ಮ ನರದಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಮುಖರ್ಜಿ ಅವರನ್ನು ಆಗಸ್ಟ್ 10ರಂದು ದೆಹಲಿಯ ಆರ್ಮಿಸ್ ರಿಸರ್ಚ್ ಅಂಡ್ ರೆಫರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ವೈರಸ್ ಸೋಂಕು ಸಹ ತಗುಲಿರುವುದು ದೃಢಪಟ್ಟಿತ್ತು. ಬಳಿಕ ಅವರ ಮೆದುಳಿನಲ್ಲಿ ಹೆಪ್ಪುಗಟ್ಟದ್ದ ರಕ್ತವನ್ನು ತೆಗೆದುಹಾಕಲು ಸೂಕ್ಷ್ಮ ಶಸ್ತ್ರಚಿಕಿತ್ಸೆ ಒಳಪಡಿಸಲಾಯಿತು.
ಅವರ ಆರೋಗ್ಯ ದಿನೇ ದಿನೇ ಗಂಭೀರ ಹಂತ ತಲುಪುತ್ತಿದ್ದು, ವೆಂಟಿಲೇಟರ್ (ಕೃತಕ ಉಸಿರಾಟ) ವ್ಯವಸ್ಥೆಯಲ್ಲಿರುವ ಅವರು ಡೀಫ್ ಕೋಮಾ ಹಂತ ತಲುಪಿದ್ಧಾರೆ ಎಂದು ಆಸ್ಪತ್ರೆಯ ಉನ್ನತ ವೈದ್ಯರು ತಿಳಿಸಿದ್ದಾರೆ.
Laxmi News 24×7