Home / Uncategorized / ಶಾಸಕ ಮಹಾಂತೇಶ ದೊಡ್ದಗೌಡರ ದಂಪತಿಗೆ ಹೂ ಮಳೆ: ಪೊಲೀಸರಿಗೆ ಶೋಕಾಸ್ ನೋಟಿಸ್ ಜಾರಿ

ಶಾಸಕ ಮಹಾಂತೇಶ ದೊಡ್ದಗೌಡರ ದಂಪತಿಗೆ ಹೂ ಮಳೆ: ಪೊಲೀಸರಿಗೆ ಶೋಕಾಸ್ ನೋಟಿಸ್ ಜಾರಿ

Spread the love

ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಪತ್ನಿಗೆ ಹೂಮಳೆಗೈದ ಪೋಲಿಸ್ ಅಧಿಕಾರಿಗಳಿಗೆ ಶೋಕಾಸ್​ ನೋಟಿಸ್ ಜಾರಿ ಮಾಡಲಾಗಿದೆ.

ನಿನ್ನೆ ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ್ದರು. ಈ ಕುರಿತು ನ್ಯೂಸ್​ಫಸ್ಟ್​ ವರದಿ ಬಿತ್ತರಿಸಿತ್ತು. ಘಟನೆ ಕುರಿತು ಶಾಸಕ ಮಹಾಂತೇಶ ದೊಡ್ಡಗೌಡರ​​ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುವದರ ಜೊತೆಗೆ ಪೋಲಿಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಸದ್ಯ ಬೈಲಹೊಂಗಲದ ಶಾಸಕನ ಮನೆಗೆ ತೆರಳಿ ಪುಷ್ಪವೃಷ್ಠಿ ಮಾಡಿದ್ದ ಪೋಲಿಸ್ ಅಧಿಕಾರಿಗಳಿಗೆ ಬೆಳಗಾವಿ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಲಕ್ಷ್ಮಣ‌ ನಿಂಬರಗಿ ಶೋಕಾಸ್​ ನೋಟಿಸ್​ ಜಾರಿ ಮಾಡಿದ್ದಾರೆ. ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ, ಬೈಲಹೊಂಗಲ ಠಾಣೆ ಸಿಪಿಐ ಯು.ಬಿ. ಸಾತೇನಹಳ್ಳಿ, ನೇಸರ್ಗಿ ಠಾಣೆ ಸಿಪಿಐ ಯಲ್ಲಪ್ಪ ಶೀಗಿಹಳ್ಳಿ, ಗುಪ್ತಚರ ಇಲಾಖೆಯ ವಿಶ್ವನಾಥ ಮಲ್ಲನ್ನವರ, ಪೇದೆ ಮಂಜುನಾಥಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ