Breaking News

ಕೇಂದ್ರ ಸರ್ಕಾರಕ್ಕೆ ಬಿಗ್‌ ಶಾಕ್:‌ ರೈತ ಹೋರಾಟಕ್ಕೆ ಬಿಜೆಪಿ ಸಂಸದ ಬೆಂಬಲ

Spread the love

ದೆಹಲಿ: ʼಅವರು ನಮ್ಮದೇ ಮಾಂಸ ಮತ್ತು ರಕ್ತ’ ಎಂದು ರೈತರ ಪ್ರತಿಭಟನೆಗೆ ಪಿಲಿಭಿತ್ ನ ಬಿಜೆಪಿ ಸಂಸದ ವರುಣ್ ಗಾಂಧಿ ಬೆಂಬಲ ನೀಡಿದ್ದಾರೆ.

ಬಿಜೆಪಿ ಸಂಸದರಾಗಿದ್ದರೂ ಕೇಂದ್ರ ಸರಕಾರವನ್ನು ಗುರಿಯಾಗಿಸಿಕೊಂಡು ವರುಣ್ ಗಾಂಧಿ ಕಿಸಾನ್ ಮಹಾ ಪಂಚಾಯತ್ ಅನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ರೈತರೊಂದಿಗೆ ಮಾತುಕತೆಗೆ ಮರುಪ್ರವೇಶಿಸಲು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

“ಮುಜಾಫರ್ ನಗರದಲ್ಲಿ ಇಂದು ಲಕ್ಷಾಂತರ ರೈತರು ಪ್ರತಿಭಟನೆಯಲ್ಲಿ ಜಮಾಯಿಸಿದ್ದಾರೆ. ಅವರು ನಮ್ಮದೇ ಮಾಂಸ ಮತ್ತು ರಕ್ತ. ನಾವು ಅವರೊಂದಿಗೆ ಗೌರವಯುತವಾಗಿ ಮರು ತೊಡಗಿಸಿಕೊಳ್ಳುವುದನ್ನು ಪ್ರಾರಂಭಿಸಬೇಕು. ಅವರ ನೋವು, ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಿ” ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಾ ಬಂದಿದ್ದು, ಈಗಾಗಲೇ ಒಂಭತ್ತು ತಿಂಗಳು ಕಳೆದಿವೆ. ಕೃಷಿ ಕಾನೂನುಗಳಿಗಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಬೇಡಿಕೆಯನ್ನು ಆಲಿಸುವವರೆಗೂ ರೈತರ ಆಂದೋಲನ ಮುಂದುವರಿಯಲಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ