Breaking News

ರೈತರಿಗೆ ಶಾಕ್, ಪಂಪ್ಸೆಟ್ ಉಚಿತ ವಿದ್ಯುತ್ ಗೆ ಬ್ರೇಕ್..? ಗ್ಯಾಸ್ ಸಬ್ಸಿಡಿ ಮಾದರಿ ‘ಗಿವ್ ಇಟ್ ಅಪ್’ ಅಭಿಯಾನ.?

Spread the love

ಬೆಂಗಳೂರು: ಎಲ್ಪಿಜಿ ಗ್ಯಾಸ್ ಸಬ್ಸಿಡಿ ಸೌಲಭ್ಯವನ್ನು ಸ್ವಯಂಪ್ರೇರಿತರಾಗಿ ಬಿಟ್ಟುಕೊಡಲು ಗಿವ್ ಇಟ್ ಅಪ್ ನಡೆಸಿದಂತೆಯೇ ವಿದ್ಯುತ್ ಗಿವ್ ಇಟ್ ಅಪ್ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಕೃಷಿ ನೀರಾವರಿ ಪಂಪ್ ಸೆಟ್ ಗಳ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ರೈತರು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಡಲು ಗಿವ್ ಇಟ್ ಅಪ್ ಅಭಿಯಾನ ಕೈಗೊಳ್ಳಲಾಗುತ್ತದೆ. ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವುದನ್ನು ನಿಲ್ಲಿಸಿದರೆ, ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತದೆ. ಹೀಗಾಗಿ ರೈತರೇ ಸ್ವಯಂ ಪ್ರೇರಿತರಾಗಿ ಉಚಿತ ವಿದ್ಯುತ್ ಸೌಲಭ್ಯ ಬಿಟ್ಟು ಕೊಡುವ ಅಭಿಯಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.

ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತಗೊಳಿಸಿದರೆ ತೀವ್ರ ಆಕ್ರೋಶ ವ್ಯಕ್ತವಾಗುತ್ತದೆ ಎಂಬುದನ್ನು ಮನಗಂಡಿರುವ ಸರ್ಕಾರ ರೈತರೇ ಸ್ವಯಂಪ್ರೇರಿತರಾಗಿ ಉಚಿತ ವಿದ್ಯುತ್ ಸೌಲಭ್ಯ ಬಿಟ್ಟು ಕೊಡುವ ಗಿವ್ ಇಟ್ ಅಪ್ ಅಭಿಯಾನ ಕೈಗೊಳ್ಳಲಿದ್ದು, ರೈತರು ಸೌಲಭ್ಯ ತ್ಯಜಿಸಿದಲ್ಲಿ ಅಷ್ಟು ವೆಚ್ಚ ಉಳಿತಾಯವಾಗುತ್ತದೆ ಎನ್ನಲಾಗಿದೆ.

ಗ್ಯಾಸ್ ಸಬ್ಸಿಡಿ ತ್ಯಜಿಸಲು ಗಿವ್ ಇಟ್ ಅಪ್ ಅಭಿಯಾನ ಆರಂಭಿಸಲಾಗಿತ್ತು. ಅನೇಕರು ಸಬ್ಸಿಡಿ ತ್ಯಜಿಸಿದ್ದರು. ವರ್ಷಗಳು ಕಳೆದಂತೆ ಗ್ಯಾಸ್ ಸಬ್ಸಿಡಿಯನ್ನೇ ನಿಲ್ಲಿಸಲಾಗಿದ್ದು, ಇದು ಅದೇ ರೀತಿ ಆಗಿ ಉಚಿತ ವಿದ್ಯುತ್ ಸೌಲಭ್ಯ ನಿಲ್ಲಿಸಬಹುದು ಎಂಬ ಆತಂಕ ರೈತರಲ್ಲಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ