ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕೆಲವು ದ್ಥಾನ ಕಳೆದುಕೊಳ್ಳಬೇಕಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಮೊದಲೇ ಹೈ ಕಮಾಂಡ್ ಗೆ ತಿಳಿಸಿದಂತೆ ನಮ್ಮ ನಿಗದಿತ 15 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ 5 ಸ್ಥಾನಗಳಲ್ಲಿ ಪಕ್ಷೇತರರು ಗೆಲ್ಲುವುದಾಗಿ ಹೇಳಿದ್ದೆವು.ಹಾಗಾಗಿ ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ.
ಆದರೆ ನಗರದ ಉತ್ತರ ಕ್ಷೇತ್ರದಲ್ಲಿ ನಮ್ಮ ಆಂತರಿಕ ಹೊಂದಾಣಿಕೆ ಕಾರಣದಿಂದಾಗಿ 8 ಸ್ಥಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಆತ್ಮಾವಲೋಕನ ಮಾಡಿಕೊಂಡಿದ್ದಾರೆ.
ಈಗಾಗಲೇ ಬಿಜೆಪಿ ಪಾಲಿಕೆ ಗದ್ದುಗೆಗೇರಲು ಅಗತ್ಯವಿರುವ ಬಹುಮತವನ್ನು ತನ್ನಲ್ಲೇ ಹೊಂದಿದೆ. ಇನ್ನು ಪಕ್ಷೇತರರಲ್ಲಿ ಎಷ್ಟೇಜನ ಕಾಂಗ್ರೆಸ್ಗೆ ಬೆಂಬಲ ನೀಡಿದರೂ ಯಾವುದೇ ಪ್ರಯೋಜನವಿಲ್ಲ ಎಂಬುದು ಎಲ್ಲರಿಗೂ ತಿಳಿದ ವಿಚಾರ