Breaking News

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ: ಹೊರಟ್ಟಿ

Spread the love

ಧಾರವಾಡ: ಚಳಿಗಾಲದ ಅಧಿವೇಶನ ಬೆಳಗಾವಿದಲ್ಲಿ ನಡೆಯುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸಿಎಂ ಇದ್ದಾಗಲೂ ನಾನು ಬೆಳಗಾವಿ ಅಧಿವೇಶನದ ಬಗ್ಗೆ ಪತ್ರ ಬರೆದಿದ್ದೆ, ತೀರ್ಮಾನ ಮಾಡುವಂತೆ ಒತ್ತಾಯ ಮಾಡಿದ್ದೆ. ಆದರೆ ಒಟ್ಟು 900 ಅಧಿಕಾರಿಗಳು, ಶಾಸಕರು ಸೇರಿ ಬಹಳ ಜನ ಆಗುತ್ತಾರೆ. ಈಗ ಮಳೆಗಾಲ ಇದೆ, ಕೋವಿಡ್ ಕೂಡ ಇದೆ ಎಂದು ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಿದರು ಎಂದರು

.ಈ ಬಾರಿ ಸಿಎಂ ನಮ್ಮ ಕಡೆಯವರಿದ್ದಾರೆ, ಸಭಾಪತಿ ಸಹ ನಮ್ಮ ಕಡೆಯವರು. ನವೆಂಬರ್, ಡಿಸೆಂಬರ್ ನಲ್ಲಿ ಸಂಪೂರ್ಣ ಬೆಳಗಾವಿಯಲ್ಲೇ ಅಧಿವೇಶನ ಆಗುತ್ತದೆ. ಬೆಳಗಾವಿಯಲ್ಲಿ ಅಧಿವೇಶನ ಮಾಡಿಯೇ ತಿರುತ್ತೇವೆ ಎಂದು ಸಭಾಪತಿ ಹೊರಟ್ಟಿ ಹೇಳಿದರು. 


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ