Breaking News

ಹಿರಣ್ಯಕೇಶಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ – ಆತಂಕದಲ್ಲಿ ನದಿ ತೀರದ ಜನ

Spread the love

ಚಿಕ್ಕೋಡಿ: ಹಿರಣ್ಯಕೇಶಿ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ನದಿ ತೀರದಲ್ಲಿರುವ ಜನರಲ್ಲಿ ಆತಂಕ ಹೆಚ್ಚಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ಬಳಿ ಹಿರಣ್ಯಕೇಶಿ ನದಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ.

ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾದ ನಂತರ ಮೊಸಳೆ ಕಾಣಿಸಿಕೊಂಡಿದ್ದು, ಈ ಪರಿಣಾಮ ನದಿ ದಡದಲ್ಲಿನ ಹೊಲಗದ್ದೆಯ ಜನರಿಗೆ ಭಯ ಎದುರಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮೊಸಳೆಯನ್ನು ಸೆರೆ ಹಿಡಿದು ನಮ್ಮ ಆತಂಕ ದೂರ ಮಾಡಬೇಕೆಂದು ಇಲ್ಲಿನ ಜನರು ಒತ್ತಾಯಿಸುತ್ತಿದ್ದಾರೆ. ಇದನ್ನೂ

ಮೊಸಳೆ ಸೆರೆ ಹಿಡಿಯುವರೆಗೂ ಗ್ರಾಮಸ್ಥರು ನದಿಗೆ ಇಳಿಯದಂತೆ ಗೋಟುರ ಗ್ರಾಮದಲ್ಲಿ ಧ್ವನಿವರ್ಧಕ ಬಳಸಿ ಎಚ್ಚರಿಕೆ ನೀಡಲಾಗುತ್ತಿದೆ.

Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ