Breaking News

ಹಿರಣ್ಯಕೇಶಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ – ಆತಂಕದಲ್ಲಿ ನದಿ ತೀರದ ಜನ

Spread the love

ಚಿಕ್ಕೋಡಿ: ಹಿರಣ್ಯಕೇಶಿ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ನದಿ ತೀರದಲ್ಲಿರುವ ಜನರಲ್ಲಿ ಆತಂಕ ಹೆಚ್ಚಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ಬಳಿ ಹಿರಣ್ಯಕೇಶಿ ನದಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ.

ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾದ ನಂತರ ಮೊಸಳೆ ಕಾಣಿಸಿಕೊಂಡಿದ್ದು, ಈ ಪರಿಣಾಮ ನದಿ ದಡದಲ್ಲಿನ ಹೊಲಗದ್ದೆಯ ಜನರಿಗೆ ಭಯ ಎದುರಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮೊಸಳೆಯನ್ನು ಸೆರೆ ಹಿಡಿದು ನಮ್ಮ ಆತಂಕ ದೂರ ಮಾಡಬೇಕೆಂದು ಇಲ್ಲಿನ ಜನರು ಒತ್ತಾಯಿಸುತ್ತಿದ್ದಾರೆ. ಇದನ್ನೂ

ಮೊಸಳೆ ಸೆರೆ ಹಿಡಿಯುವರೆಗೂ ಗ್ರಾಮಸ್ಥರು ನದಿಗೆ ಇಳಿಯದಂತೆ ಗೋಟುರ ಗ್ರಾಮದಲ್ಲಿ ಧ್ವನಿವರ್ಧಕ ಬಳಸಿ ಎಚ್ಚರಿಕೆ ನೀಡಲಾಗುತ್ತಿದೆ.

Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ