Breaking News

ಎಣ್ಣೆಪ್ರಿಯರಿಗೆ ಹೊಡೆತ ಕೊಟ್ಟ ನಿಫಾ ವೈರಸ್​; ಮಂಗಳೂರಲ್ಲಿ 31 ಮದ್ಯದಂಗಡಿ ಬಂದ್

Spread the love

ಬೆಂಗಳೂರು: ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಕಾಟ ಒಂದೆಡೆಯಾದ್ರೆ, ನಿಫಾ ವೈರಸ್​ನ ಭೀತಿ ಮತ್ತೊಂದೆಡೆಯಾಗಿದೆ.

ಈ ಸಂಬಂಧ ಕೇರಳದಿಂದ ಕರ್ನಾಟಕಕ್ಕೂ ನಿಫಾ ವೈರಸ್​ನ ಕಂಟಕ ಎದುರಾಗಿದೆ. ಈ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಆರೋಗ್ಯ ಇಲಾಖೆಯು ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ನಿಫಾ ಅಲರ್ಟ್​ ಘೋಷಣೆ ಮಾಡಲಾಗಿದೆ.

ಈ ಸಂಬಂಧ ಚಿಕಿತ್ಸೆಗಾಗಿ ಜಿಲ್ಲೆಯ ಆಸ್ಪತ್ರೆಗೆ ಬರುವ ರೋಗಿಗಗಳ ಮೇಲೆ ನಿಗಾವಹಿಸಬೇಕು. ಕೇರಳದಿಂದ ಜಿಲ್ಲೆಗೆ ಆಗಮಿಸುವವ ಮೇಲೂ ನಿಗಾವಹಿಸಬೇಕು. ಜೊತೆಗೆ ನಿಫಾ ವೈರಸ್ ಲಕ್ಷಣಗಳಿರೋ ಬಗ್ಗೆ ಸ್ಕ್ರೀನಿಂಗ್ ಮಾಡಲು ಜಿಲ್ಲೆಯ ಎಲ್ಲಾ 8 ಮೆಡಿಕಲ್ ಕಾಲೇಜುಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಜೊತೆಗೆ ಜಿಲ್ಲೆಯ 19 ಗ್ರಾಮಗಳ 31 ಮದ್ಯದಂಗಡಿಗಳನ್ನು ಮುಚ್ಚಲೂ ಕೂಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ