ಬೆಂಗಳೂರು: ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಕಾಟ ಒಂದೆಡೆಯಾದ್ರೆ, ನಿಫಾ ವೈರಸ್ನ ಭೀತಿ ಮತ್ತೊಂದೆಡೆಯಾಗಿದೆ.
ಈ ಸಂಬಂಧ ಕೇರಳದಿಂದ ಕರ್ನಾಟಕಕ್ಕೂ ನಿಫಾ ವೈರಸ್ನ ಕಂಟಕ ಎದುರಾಗಿದೆ. ಈ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಆರೋಗ್ಯ ಇಲಾಖೆಯು ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ನಿಫಾ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಸಂಬಂಧ ಚಿಕಿತ್ಸೆಗಾಗಿ ಜಿಲ್ಲೆಯ ಆಸ್ಪತ್ರೆಗೆ ಬರುವ ರೋಗಿಗಗಳ ಮೇಲೆ ನಿಗಾವಹಿಸಬೇಕು. ಕೇರಳದಿಂದ ಜಿಲ್ಲೆಗೆ ಆಗಮಿಸುವವ ಮೇಲೂ ನಿಗಾವಹಿಸಬೇಕು. ಜೊತೆಗೆ ನಿಫಾ ವೈರಸ್ ಲಕ್ಷಣಗಳಿರೋ ಬಗ್ಗೆ ಸ್ಕ್ರೀನಿಂಗ್ ಮಾಡಲು ಜಿಲ್ಲೆಯ ಎಲ್ಲಾ 8 ಮೆಡಿಕಲ್ ಕಾಲೇಜುಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಜೊತೆಗೆ ಜಿಲ್ಲೆಯ 19 ಗ್ರಾಮಗಳ 31 ಮದ್ಯದಂಗಡಿಗಳನ್ನು ಮುಚ್ಚಲೂ ಕೂಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ.