Breaking News

ಸೆ.13ರಂದು ಗಜಪಡೆ ಆಗಮನ, ಅ.7ಕ್ಕೆ ದಸರಾ ಉದ್ಘಾಟನೆ

Spread the love

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಪಯಣ ಸೆ.13ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ನಡೆಯಲಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯಲಿದೆ.

ಬುಧವಾರ ದಸರಾ ಆಚರಣೆ ಸಂಬಂಧ ಅರಮನೆ ಮಂಡಳಿ ಸಭಾಂಗಣದಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಕೋವಿಡ್‌ ಹಿನ್ನೆಲೆ ಕಳೆದ ಬಾರಿಯಂತೆ ಈ ಬಾರಿಯೂ ಅರಮನೆಗೆ ಸೀಮಿತವಾಗುವಂತೆ ಸರಳ, ಸಾಂಪ್ರದಾಯಿಕ ದಸರಾ ಆಚರಿಸಲಾಗುವುದು ಎಂದರು.

ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯನ್ನು ವೀರನಹೊಸಹಳ್ಳಿಯಲ್ಲಿ ಸೆ.13ರಂದು ಬೆಳಗ್ಗೆ 9.30ರಿಂದ 10.20ರೊಳಗೆ ಅಭಿಮನ್ಯು ನೇತೃತ್ವದ 8 ಆನೆಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುತ್ತದೆ. ಸೆ.16ರಂದು ಅರಣ್ಯ ಭವನಕ್ಕೆ ಗಜಪಡೆ ಆಗಮಿಸಲಿದ್ದು, ಸೆ.17ರಂದು ಅರಮನೆಗೆ ಸ್ವಾಗತಿಸಲಾಗುತ್ತದೆ. ಜಂಬೂ ಸವಾರಿ ಮುಗಿದ ಬಳಿಕ ಅ.17ರಂದು ಗಜಪಡೆಗೆ ಬೀಳ್ಕೊಡುಗೆ ನೀಡಲಾಗುತ್ತದೆ ಎಂದು ತಿಳಿಸಿದರು.

 

ಅ.7ಕ್ಕೆ ದಸರಾ ಉದ್ಘಾಟನೆ: ಈ ಬಾರಿಯ ದಸರಾ ಮಹೋತ್ಸವ ಅ.7ರಂದು ಚಾಮುಂಡಿ ಬೆಟ್ಟದಲ್ಲಿ 8.15ರಿಂದ 8.45ರಲ್ಲಿ ಸಲ್ಲುವ ಶುಭ ಲಗ್ನದಲ್ಲಿ ಉದ್ಘಾಟನೆಗೊಳ್ಳಲಿದೆ. ಉದ್ಘಾಟಕರು ಯಾರು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ. ಅ.15ರ ಸಂಜೆ 4.36 ರಿಂದ 4.46ರಲ್ಲಿ ಸಲ್ಲುವ ಶುಭ ಲಗ್ನದಲ್ಲಿ ನಂದಿ ಪೂಜೆ, ಸಂಜೆ 5 ರಿಂದ 5.36ಕ್ಕೆ ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣದಲ್ಲಿಯೇ ನಡೆಯಲಿದೆ ಎಂದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ