Breaking News
Home / ರಾಜಕೀಯ / ಮಂಡ್ಯದಲ್ಲೊಂದು ಭಾರಿ ದುರಂತ: ಹಂದಿ ಎಂದು ತಿಳಿದು ಬೇಟೆಗಾರನಿಂದ ಯುವಕನಿಗೆ ಗುಂಡು

ಮಂಡ್ಯದಲ್ಲೊಂದು ಭಾರಿ ದುರಂತ: ಹಂದಿ ಎಂದು ತಿಳಿದು ಬೇಟೆಗಾರನಿಂದ ಯುವಕನಿಗೆ ಗುಂಡು

Spread the love

ಮಂಡ್ಯ: ಕಾಡುಹಂದಿಗೆ ಬೇಟೆಗೆ ಬಂದಿದ್ದ ಹವ್ಯಾಸಿ ಬೇಟೆಗಾರರಿಂದ ಯುವಕನಿಗೆ ಗುಂಡು ತಗುಲಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ಮಾದೇಶ್ (25) ಎಂಬ ಯುವಕನಿಗೆ ಗುಂಡೇಟು ತಗುಲಿದೆ.

ಮೈಸೂರು ಜಿಲ್ಲೆಯ 6 ಮಂದಿ ಯುವಕರ ತಂಡ ಬೇಟೆಗೆ ಬಂದಿತ್ತು. ನಾಡಬಂದೂಕು ಬಳಸಿ ಕಾಡುಹಂದಿ ಬೇಟೆಗೆ ಈ ತಂಡ ಬಂದಿತ್ತು. ಮಾದೇಶ ಅವರ ಕಬ್ಬಿನ ಗದ್ದೆಯಲ್ಲಿ ಹಂದಿಗಾಗಿ ತಂಡ ಶೋಧ ನಡೆಸುತ್ತಿತ್ತು. ಈ ಸಮಯದಲ್ಲಿ ಅದೇ ಗದ್ದೆಯ ಬದುವಿನಲ್ಲಿ ಮಾದೇಶ ಹುಲ್ಲು ಕೊಯ್ಯುತ್ತಿದ್ದ. ಕಬ್ಬಿನ ಗರಿಗಳು ಅಲುಗಾಡುತ್ತಿದ್ದನ್ನು ಗಮನಿಸಿದ ತಂಡ ಹಂದಿ ಇರಬಹುದು ಎಂದುಕೊಂಡು ಫೈರಿಂಗ್ ಮಾಡಿದೆ. ಇದು ಮಾದೇಶನಿಗೆ ತಗುಲಿದೆ.

ಮಾದೇಶನ ಹೊಟ್ಟೆ ಭಾಗಕ್ಕೆ ಗುಂಡು ತಗುಲಿ ಗಂಭೀರ ಗಾಯವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರು ಮಂದಿ ಯುವಕರ ಪೈಕಿ ಮೂವರನ್ನು ಹಿಡಿದು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದು, ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ