ಹಾಸನ: ಗಣೇಶ ವಿಸರ್ಜನೆ ವೇಳೆ ಯುವಕರ ಗುಂಪೊಂದು ಪೊಲೀಸರನ್ನೇ ತಳ್ಳಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಡಿಜೆ ಡ್ಯಾನ್ಸ್ ತಡೆಯಲು ಮುಂದಾದ ಪೊಲೀಸ್ ಅಧಿಕಾರಿಯ ಮೇಲೆ ದುಂಡಾ ವರ್ತನೆ ತೋರಿದ್ದಾರೆ.
ಸಕಲೇಶಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ಯುವಕರು ಡಿಜೆ ಸೌಂಡಿಗೆ ಡ್ಯಾನ್ಸ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಡಿಜೆ ಡ್ಯಾನ್ಸ್ ತಡೆಯಲು ಹೋದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬಸವರಾಜು ಚಿಂಚೋಳಿ ಮತ್ತು ಯುವಕರ ನಡುವೆ ಮಾತಿಗೆ ಮಾತು ಬೆಳೆದಿದೆ.
ಇನ್ನು, ಗಲಾಟೆಗೆ ಜೋರಾಗಿಯೇ ನಡೆದಿದ್ದು ಪೊಲೀಸರನ್ನೇ ಯುವಕರು ತಳ್ಳಾಡಿದ್ದಾರೆ. ಈ ವೇಳೆ ಪೊಲೀಸರು ಅಸಹಾಯಕರಾಗಿದ್ದು, ಇದುವರೆಗೂ ಪ್ರಕರಣ ದಾಖಲಾಗಿಲ್ಲ.