Breaking News

ಸಂಚಾರ ನಿಯಮ ಉಲ್ಲಂಘನೆಯಲ್ಲಿ ರವಿಕಾಂತೇಗೌಡರ ಅಭಿಮಾನಿ ದಾಖಲೆ ನಿರ್ಮಾಣ

Spread the love

ಬೆಂಗಳೂರು: ಸ್ಕೂಟರ್ ಮೇಲೆ ರವಿಕಾಂತೇಗೌಡ ಅಭಿಮಾನಿ ಎಂದು ಬರೆಸಿಕೊಂಡು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ಬೈಕ್​ನ್ನು ಜಯನಗರ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಚಾರಿ ವಿಭಾಗ ಜಂಟಿ ಪೊಲೀಸ್ ಆಯುಕ್ತ ಆಗಿರುವ ರವಿಕಾಂತೇಗೌಡ ಹೆಸರು ಬರೆಸಿಕೊಂಡು ನಿಯಮ ಉಲ್ಲಂಘಿಸುತ್ತಿದ್ದವರ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಕೆಎ 05 ಜೆಎಸ್ 2581 ನಂಬರಿನ ಸ್ಕೂಟರ್ ಸೀಜ್ ಮಾಡಲಾಗಿದೆ. ಸ್ವತಃ ರವಿಕಾಂತರೆಗೌಡರ ಆದೇಶದ ಮೇರೆಗೆ ಸ್ಕೂಟರ್ ಸೀಜ್ ಮಾಡಲಾಗಿದೆ.

ಆರ್​ಟಿಐ ಕಾರ್ಯಕರ್ತ ಗಿರೀಶ್ ಬಾಬು ಓಡಿಸುತ್ತಿದ್ದ ವಾಹನ ಇದಾಗಿದ್ದು, ಗಿರೀಶ್, ಪರಮೇಶ್ ಎಂಬ ಸ್ನೇಹಿತನಿಂದ ಸ್ಕೂಟರ್ ಖರೀದಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಆದರೆ ಇವರ ಹೆಸರಿಗೆ ವಾಹನ ವರ್ಗಾವಣೆ ಮಾಡಿಕೊಂಡಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. 12.30 ಸುಮಾರಿಗೆ ಜಯನಗರ ಟ್ರಾಫಿಕ್ ಪೊಲೀಸರು ವಾಹನ ಸೀಜ್ ಮಾಡಿ ತಂದಿದ್ದಾರೆ. ಬಳಿಕ, ದಂಡ ಮೊತ್ತ ಪಾವತಿಗೆ ಗಿರೀಶ್ ಬಾಬು ಸಮಯ ಕೇಳಿದ್ದಾರೆ. ಈಗ ಕೊರೊನಾ ಟೈಂ ಹಣ ಇಲ್ಲ ಸಮಯ ಬೇಕು ಎಂದು ಗಿರೀಶ್ ಬಾಬು ಹೇಳಿದ್ದಾರೆ.

ಜಯನಗರ ಟ್ರಾಫಿಕ್ ಪೊಲೀಸ್ ಇನ್ಸ್​ಪೆಕ್ಟರ್ ಗಿರೀಶ್ ಬಾಬುಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ರವಿಕಾಂತೇಗೌಡರ ಅಭಿಮಾನಿ ಆದ್ರೆ ಕೈ, ಎದೆ ಮೇಲೆ ಹಚ್ಚೆ ಹಾಕಿಸಿಕೊಳ್ಳಿ. ವಾಹನದ ಮೇಲೆ ಯಾಕೆ ಬರೆಸಿಕೊಂಡಿರೋದು ಎಂದು ಕೇಳಿದ್ದಾರೆ. ಸರಿಯಾಗಿ ಸಂಚಾರಿ ನಿಯಮ ಪಾಲಿಸೋದಾದರೆ ಪರವಾಗಿಲ್ಲ. ನೀವು ಹೆಸರು ಬರೆಸಿಕೊಂಡರು ಪರವಾಗಿಲ್ಲ ಎಂದು ತಿಳಿಸಿ ಹೇಳಿದ್ದಾರೆ. ಸದ್ಯ ಜಯನಗರ ಟ್ರಾಫಿಕ್ ಪೊಲೀಸರು ರವಿಕಾಂತೇಗೌಡ ಹೆಸರಿಗೆ ಪೈಂಟ್ ಬಳಿದಿದ್ದಾರೆ. ಫೈನ್ ಕಟ್ಟಲು ಕಾಲಾವಕಾಶ ಕೇಳಿರುವುದರಿಂದ ಅಲ್ಲಿವರೆಗೂ ಸ್ಕೂಟರ್ ಠಾಣೆಯಲ್ಲಿ ಇರಲಿ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

 

 


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ