Breaking News

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನ

Spread the love

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ.

 

ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ, ವರ್ಗಾವಣೆ ದಂಧೆ ಕುರಿತು ಪ್ರಸ್ತಾವಿಸುವುದಾಗಿ ವಿಪಕ್ಷ ಕಾಂಗ್ರೆಸ್‌ ಘೋಷಿಸಿದ್ದು, ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಮಧ್ಯೆ ವಾಕ್ಸಮರ, ಆರೋಪ – ಪ್ರತ್ಯಾರೋಪ, ಬಿಸಿ ಬಿಸಿ ಚರ್ಚೆಗೆ ವೇದಿಕೆಯಾಗಲಿದೆ.

 

6 ತಿಂಗಳ ಬಳಿಕ ಅಧಿವೇಶನ ನಡೆ ಯುತ್ತಿದ್ದು, ಕೊರೊನಾದಿಂದಾಗಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಭೂಕಬಳಿಕೆ ವಿರುದ್ಧ ಕ್ರಮಕ್ಕೆ ತಿದ್ದುಪಡಿ ಮಸೂದೆ, ಬಿಡಬ್ಲ್ಯುಎಸ್‌ಎಸ್‌ಬಿ ತಿದ್ದುಪಡಿ, ಪೌರಸಭೆ, ಶಿಕ್ಷಕರ ವರ್ಗಾವಣೆ ನಿಯಮ ಮಸೂದೆ ಮತ್ತು 4 ಅಧ್ಯಾದೇಶ ಸಹಿತ 18 ಮಸೂದೆಗಳ ಮಂಡನೆಗೆ ಸರಕಾರ ಸಿದ್ಧವಾಗಿದೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ