Breaking News
Home / ಜಿಲ್ಲೆ / ಬೆಂಗಳೂರು / ಬಿಜೆಪಿ ಹಣದಿಂದ ಅಧಿಕಾರಕ್ಕೆ ಬಂದಿರುವುದಕ್ಕೆ ಶ್ರೀಮಂತ್‌ ಪಾಟೀಲ್‌ ಹೇಳಿಕೆ ಸಾಕ್ಷಿ: ದಿನೇಶ್‌

ಬಿಜೆಪಿ ಹಣದಿಂದ ಅಧಿಕಾರಕ್ಕೆ ಬಂದಿರುವುದಕ್ಕೆ ಶ್ರೀಮಂತ್‌ ಪಾಟೀಲ್‌ ಹೇಳಿಕೆ ಸಾಕ್ಷಿ: ದಿನೇಶ್‌

Spread the love

ಬೆಂಗಳೂರು: ಕಾಗವಾಡ ಶಾಸಕ ಶ್ರೀಮಂತ್‌ ಪಾಟೀಲ್‌ ಬಿಜೆಪಿ ಸೇರಲು ಹಣದ ಆಫ‌ರ್‌ ನೀಡಿದ್ದ ಬಗ್ಗೆ ಸ್ವತಃ ಒಪ್ಪಿಕೊಂಡಿದ್ದಾರೆ. ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಇದು ಸಾಕ್ಷಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, 17 ಶಾಸಕರನ್ನು ಬಿಜೆಪಿ ಅಕ್ರಮ ದುಡ್ಡಿನಿಂದ ಖರೀದಿಸಿದೆ ಎಂಬುದು ಕೊನೆಗೂ ನಿಜವಾಗಿದೆ. ಶಾಸಕರ ಖರೀದಿಸಿ ಅಧಿಕಾರಕ್ಕೆ ಬಂದಿರುವ ಈ ಸರ್ಕಾರ ಅಕ್ರಮ ಸಂತಾನ. ಶಾಸಕರ ಖರೀದಿಗೆ ಬಳಕೆಯಾದ ಹಣದ ಮೂಲ ಯಾವುದು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಸರ್ಕಾರ ರಚನೆಗೆ 17 ಶಾಸಕರ ಖರೀದಿಗೆ ಸುರಿದ ಅಕ್ರಮ ಹಣ ಯಾರು ತಿಂದು ವಿಸರ್ಜನೆ ಮಾಡಿದ ಹಣ ಎಂದ ಹೇಳಬೇಕು, ಈ ಅಕ್ರಮ ಹಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಮುಂದುವರಿಯಲು ನೈತಿಕತೆ ಉಳಿದಿಲ್ಲ, ಸಂವಿಧಾನಬದ್ಧವಾಗಿ ಚುನಾಯಿತವಾದ ಸರ್ಕಾರವನ್ನು ಸಂವಿಧಾನ ಬಾಹಿರವಾಗಿ ಕೆಡವುವ ಹೀನ ಸಂಸ್ಕೃತಿ ಬಿಜೆಪಿಯವರದ್ದು ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ