Breaking News
Home / ರಾಜಕೀಯ / ದೊಣ್ಣೆಯಿಂದ ಹೊಡೆದು ಅಪ್ಪನನ್ನೇ ಕೊಂದ ಮಗ!

ದೊಣ್ಣೆಯಿಂದ ಹೊಡೆದು ಅಪ್ಪನನ್ನೇ ಕೊಂದ ಮಗ!

Spread the love

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳವಾಗಿದ್ದು, ದೊಣ್ಣೆಯಿಂದ ಹೊಡೆದು ಮಗನೇ ಅಪ್ಪನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ನಡೆದಿದೆ.

ಕೊಲೆಯಾದವರನ್ನು ಕುಮಾರನಾಯ್ಕ (55) ಎಂದು ಗುರುತಿಸಲಾಗಿದೆ. ಇವರನ್ನು ಮಗ ಮಧು (28) ಕೊಲೆ ಮಾಡಿದ್ದಾನೆ. ಭಾನುವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಮಧು ತನ್ನ ತಂದೆಗೆ ದೊಣ್ಣೆಯಿಂದ ಹೊಡೆದಿದ್ದಾನೆ.

ದೊಣ್ಣೆಯಿಂದ ಹೊಡೆದ ರಭಸಕ್ಕೆ ಕುಮಾರನಾಯ್ಕನ ಕಿವಿಯಲ್ಲಿ ರಕ್ತಸ್ರಾವ ಆಗಿತ್ತು. ಮದ್ಯದ ಅಮಲಿನಲ್ಲಿ ಇದ್ದಿದ್ದರಿಂದ ಕುಮಾರನಾಯ್ಕನಿಗೆ ಇದು ಗೊತ್ತಾಗಿರಲಿಲ್ಲ. ಗಲಾಟೆಯಾದ ನಂತರ ಕುಮಾರನಾಯ್ಕ ಮನೆಯಿಂದ ಹೊರಗೆ ಹೋಗಿದ್ದಾನೆ. ತಡರಾತ್ರಿ ಮನೆಗೆ ವಾಪಸ್ಸಾಗಿ ಮನೆಯ ಜಗುಲಿ ಮೇಲೆ ಮಲಗಿಕೊಂಡಿದ್ದ. ಮಲಗಿದ್ದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ