Breaking News

ಪೆಟ್ರೊಲ್‌, ಡಿಸೇಲ್‌ ಜಿಎಸ್‌ಟಿ ವ್ಯಾಪ್ತಿಗೆ ತರಲು ಕಾಂಗ್ರೆಸ್‌ ಹೋರಾಟ ಮಾಡಲಿ: ಸಿಟಿ ರವಿ

Spread the love

ಬೆಂಗಳೂರು: ಕಾಂಗ್ರೆಸ್‌ ನವರಂತೆ ದೇಶದ ಚಿನ್ನವನ್ನ ಪ್ರಧಾನಿ ಮೋದಿ ಅವರು ಅಡ ಇಟ್ಟಿಲ್ಲ. ಬೆಲೆ ಏರಿಕೆ ಮಾಡಿ ಮೋದಿ ಅವರು ಭ್ರಷ್ಟಾಚಾರ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್‌ ನಿಂದಾದ ಬದಲಾವಣೆಗಳು, ಜಾಗತಿಕ ಮಟ್ಟದಲ್ಲಿ ಹಣದುಬ್ಬರದಿಂದಾಗಿ ಬೆಲೆ ಏರಿಕೆಯಾಗಿದೆ. ಅತಿ ಹೆಚ್ಚು ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿದೆ.

ಕಾಂಗ್ರೆಸ್‌ಗೆ ಬೆಲೆ ಏರಿಕೆ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಆ ರಾಜ್ಯಗಳಲ್ಲಿರುವ ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌ , ಡಿಸೇಲ್‌ ಬೆಲೆಯನ್ನ ಇಳಿಕೆ ಮಾಡಲಿ ಎಂದು ಸಿ.ಟಿ. ರವಿ ಸವಾಲು ಹಾಕಿದರು.

ಪೆಟ್ರೋಲ್‌ , ಡಿಸೇಲ್‌ ಅನ್ನ ಜಿಎಸ್‌ ಟಿ ಅಡಿಯಲ್ಲಿ ತರಲಿ ಎಂದು ಕಾಂಗ್ರೆಸ್‌ ಹೋರಾಟ ಮಾಡಲಿ. ದೇಶದಾದ್ಯಂತ ಪೆಟ್ರೋಲ್‌ , ಡಿಸೇಲ್‌ ದರ ಸಮಾನವಾಗಿರುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ