Home / ರಾಜಕೀಯ / ರಾಜ್ಯ ವಿಧಾನ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿ 10 ಮಸೂದೆಗಳ ಮಂಡನೆ

ರಾಜ್ಯ ವಿಧಾನ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿ 10 ಮಸೂದೆಗಳ ಮಂಡನೆ

Spread the love

ಬೆಂಗಳೂರು: ರಾಜ್ಯ ವಿಧಾನ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿ 10 ಮಸೂದೆಗಳನ್ನು ಮಂಡಿಸಲಾಯಿತು.

ಬಜೆಟ್‌ನಲ್ಲಿ ಘೋಷಣೆ ಮಾಡಿರು ವಂತೆ ಕರ್ನಾಟಕ ಸ್ಟಾಂಪ್‌ ತಿದ್ದುಪಡಿ ಮಸೂದೆ 2021 ಅನ್ನು ಕಂದಾಯ ಸಚಿವ ಆರ್‌. ಅಶೋಕ್‌ ಮಂಡನೆ ಮಾಡಿದರು. 35-45 ಲಕ್ಷ ರೂ. ನಡುವಿನ ಮೌಲ್ಯದ ಅಪಾರ್ಟ್‌ ಮೆಂಟ್‌ಗಳ ಮೊದಲ ನೋಂದಣಿಗೆ ಮುದ್ರಾಂಕ ಸುಂಕ ಕಡಿಮೆ ಮಾಡಲು ಈ ತಿದ್ದುಪಡಿ ಮಸೂದೆ ತರಲಾಗಿದೆ.

ಮಳೆ ಕೊಯ್ಲು ಕಡ್ಡಾಯ :

ಕಾವೇರಿ ನೀರು ಅಥವಾ ಅಂತರ್ಜಲ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಮಳೆನೀರು ಕೊಯ್ಲನ್ನು ಕಡ್ಡಾಯಗೊಳಿಸಲು ರಾಜ್ಯ ಸರಕಾರ ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಾಸಾರ ಚರಂಡಿ ವ್ಯವಸ್ಥೆ (ತಿದ್ದುಪಡಿ)ಮಸೂದೆ ಮಂಡನೆ ಮಾಡಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮಸೂದೆ ಮಂಡನೆ ಮಾಡಿದರು.

ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ಮಸೂದೆ 2021, ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ಮಸೂದೆ‌, 2021, ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ತಿದ್ದುಪಡಿ ಮಸೂದೆ-2021,

ನಗರ ಸ್ಥಳೀಯ ನಿಧಿ ಪರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ಮಸೂದೆ 2021, ಕರ್ನಾಟಕ ಕೃಷಿ ಸಂಬಂಧಿ ಮತ್ತು ರೋಗಗಳ (ತಿದ್ದುಪಡಿ) ಮಸೂದೆ, ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಮಸೂದೆ 2021 ಅನ್ನು ಮಂಡಿಸಲಾಯಿತು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ