Breaking News

ಶ್ರೀಶೈಲ ಜಗದ್ಗುರುಗಳಿಂದ ವೀರಭದ್ರೇಶ್ವರ ಜಯಂತಿ

Spread the love

ಚಿಕ್ಕೋಡಿ: ಭಾದ್ರಪದ ಮಾಸದ ಪ್ರಥಮ ಮಂಗಳವಾರ ಪ್ರತಿ ವರ್ಷ ವೀರಭದ್ರೇಶ್ವರ ಜಯಂತಿಯನ್ನು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸುಕ್ಷೇತ್ರ ಯಡೂರ ಗ್ರಾಮದಲ್ಲಿ ಅತಿ ಸರಳವಾಗಿದೆ ಆಚರಣೆ ಮಾಡಿದರು.

 

ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರ ದೇವಸ್ಥಾನದಲ್ಲಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೀರಭದ್ರೇಶ್ವರ ಮೂರ್ತಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಮಾಡಿ ವಿಶ್ವ ಶಾಂತಿಗಾಗಿ ದೇವರಲ್ಲಿ ಆರಾಧಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಕೊರೊನಾ ಕಾರಣದಿಂದಾಗಿ ಈ ಬಾರಿ ವೀರಭದ್ರೇಶ್ವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ವಿಶ್ವಶಾಂತಿ ಹಾಗೂ ಕೊರೊನಾ ಮಹಾಮಾರಿ ತೊಲಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ