Breaking News
Home / ರಾಜಕೀಯ / ಬೈಕ್ ಅಪಘಾತ- ಚಿಕಿತ್ಸೆ ಫಲಿಸದೆ ಸೈನಿಕ ಸಾವು

ಬೈಕ್ ಅಪಘಾತ- ಚಿಕಿತ್ಸೆ ಫಲಿಸದೆ ಸೈನಿಕ ಸಾವು

Spread the love

ಬಾಗಲಕೋಟೆ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸೈನಿಕನೊಬ್ಬ ಚಿಕಿತ್ಸೆ ಫಲಿಸದೇ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

 

ಜಿಲ್ಲೆಯ ಬಾದಾಮಿ ತಾಲೂಕಿನ ಸೂಳಿಕೇರಿ ಗ್ರಾಮದ ಹನಮಂತ ಸಿದ್ರಾಮಪ್ಪ ಹಡಪದ(33) ಮೃತಪಟ್ಟ ದುರ್ದೈವಿ. ಬಾದಾಮಿಯಿಂದ ಪಟ್ಟದಕಲ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ನಂದಿಕೇಶ್ವರ ಗ್ರಾಮದ ಹತ್ತಿರ ಪಲ್ಸರ್ ಬೈಕ್‍ನಲ್ಲಿ ವೇಗವಾಗಿ ಬಂದ ಮಂಜುನಾಥ ಮಾಗುಂಡಪ್ಪ ಜತ್ತಿ, ಸೈನಿಕ ತೆರಳುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದ್ದ. ಕಳೆದ ಸೆ.8 ರಂದು ಘಟನೆ ನಡೆದಿತ್ತು.

ತಲೆಗೆ ತೀವ್ರ ಪೆಟ್ಟಾಗಿ, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಹನಮಂತ ಹಡಪದ ಅವರನ್ನು ದಾಖಲಿಸಲಾಗಿತ್ತು.  ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದು, ಈ ಕುರಿತು ಮೃತ ಸೈನಿಕನ ಪತ್ನಿ ಶಶಿಕಲಾ ಹಡಪದ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ ಎಂದು ಪಿಎಸ್‍ಐ ನೇತ್ರಾವತಿ ಪಾಟೀಲ್ ತಿಳಿಸಿದ್ದಾರೆ.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ