Breaking News

ಸಿಸಿಟಿವಿ ಧ್ವಂಸಗೊಳಿಸಿ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ

Spread the love

ಬೀದರ್ : ಬ್ಯಾಂಕ್ ಎಟಿಎಂ ಹಾಗೂ ಸಿಸಿ ಟಿವಿ ಧ್ವಂಸ ಮಾಡಿ ದರೋಡೆಕೋರ ಕಳ್ಳತನಕ್ಕೆ ವಿಫಲ ಯತ್ನ ಮಾಡಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದಲ್ಲಿ ಎಸ್.ಬಿಐ ಬ್ಯಾಂಕ್ ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ಮಾಡಿ ಹಣ ಸಿಗದೆ ದರೋಡೆಕೋರ ಬರಿಗೈಯಲ್ಲಿ ತೆರಳಿದ್ದಾನೆ.

ದರೋಡೆಕೋರ ಎಟಿಎಂ ಒಳಗಡೆ ನುಗ್ಗಿ ದರೋಡೆಗೆ ಯತ್ನ ಮಾಡಿದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ಕಳ್ಳತನ ಮಾಡಲು ಬಂದಿದ್ದ ಕಳ್ಳ ಸಿಸಿ ಟಿವಿ ಗಮನಿಸಿದ ಬಳಿಕ ಎಚ್ಚರಗೊಂಡು ಸಿಸಿಟಿವಿಯನ್ನು ಧ್ವಂಸ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ. 

ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನ ಅಧಾರದ ಮೇಲೆ ಮಂಠಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದರೋಡೆಕೋರನ ಶೋಧಕ್ಕಾಗಿ ಬಲೆ ಬಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ