Breaking News

ಸಿಸಿಟಿವಿ ಧ್ವಂಸಗೊಳಿಸಿ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ

Spread the love

ಬೀದರ್ : ಬ್ಯಾಂಕ್ ಎಟಿಎಂ ಹಾಗೂ ಸಿಸಿ ಟಿವಿ ಧ್ವಂಸ ಮಾಡಿ ದರೋಡೆಕೋರ ಕಳ್ಳತನಕ್ಕೆ ವಿಫಲ ಯತ್ನ ಮಾಡಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದಲ್ಲಿ ಎಸ್.ಬಿಐ ಬ್ಯಾಂಕ್ ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ಮಾಡಿ ಹಣ ಸಿಗದೆ ದರೋಡೆಕೋರ ಬರಿಗೈಯಲ್ಲಿ ತೆರಳಿದ್ದಾನೆ.

ದರೋಡೆಕೋರ ಎಟಿಎಂ ಒಳಗಡೆ ನುಗ್ಗಿ ದರೋಡೆಗೆ ಯತ್ನ ಮಾಡಿದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ಕಳ್ಳತನ ಮಾಡಲು ಬಂದಿದ್ದ ಕಳ್ಳ ಸಿಸಿ ಟಿವಿ ಗಮನಿಸಿದ ಬಳಿಕ ಎಚ್ಚರಗೊಂಡು ಸಿಸಿಟಿವಿಯನ್ನು ಧ್ವಂಸ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ. 

ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನ ಅಧಾರದ ಮೇಲೆ ಮಂಠಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದರೋಡೆಕೋರನ ಶೋಧಕ್ಕಾಗಿ ಬಲೆ ಬಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ