Breaking News
Home / ರಾಜಕೀಯ / 6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕಾಮುಕ ಆತ್ಮಹತ್ಯೆಗೆ ಶರಣು: ರೈಲ್ವೆ ಹಳಿ ಮೇಲೆ ಶವ ಪತ್ತೆ

6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕಾಮುಕ ಆತ್ಮಹತ್ಯೆಗೆ ಶರಣು: ರೈಲ್ವೆ ಹಳಿ ಮೇಲೆ ಶವ ಪತ್ತೆ

Spread the love

ಹೈದರಾಬಾದ್​: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಗುರುವಾರ ವರದಿಯಾಗಿದೆ. ಆರೋಪಿಯ ಮೃತದೇಹವು ಘಣಪುರ್​ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದ್ದು, ಪೊಲೀಸರು ಈ ಬಗ್ಗೆ ಮಾಹಿತಿಯನ್ನು ಖಚಿತಪಡಿಸಬೇಕಿದೆ.

ಆರೋಪಿಯನ್ನು ಪಲ್ಲಕೊಂಡ ರಾಜು (30) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್​ 9ರಂದು 6 ವರ್ಷದ ಬಾಲಕಿ ಸೈದಾಬಾದ್​ನ ಸಿಂಗ್ರೌಣಿ ಕಾಲನಿಯಲ್ಲಿರುವ ತನ್ನ ನಿವಾಸದಿಂದ ನಾಪತ್ತೆಯಾಗಿದ್ದಳು. ಮರುದಿನ ಆಕೆಯ ಮೃತದೇಹವು ಬೆಡ್​ಶೀಟ್​ನಲ್ಲಿ ಸುತ್ತಿಟ್ಟಿದ್ದ ಸ್ಥಿತಿಯಲ್ಲಿ ನೆರೆಯ ಮನೆಯಲ್ಲೇ ಪತ್ತೆಯಾಗಿತ್ತು. ಇದಾದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆಯ ಮೇಲೆ ಕಾಮುಕ ಅಟ್ಟಹಾಸ ನಡೆಸಿ ಕೊಲೆ ಮಾಡಿದ್ದ. ಇದಾದ ಬಳಿಕ ಆರೋಪಿ ಪರಾರಿಯಾಗಿದ್ದ.

ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪಿಯ ಸಂಹಾರಕ್ಕೆ ದೇಶಾದ್ಯಂತ ಆಗ್ರಹಗಳು ಕೇಳಿಬರುತ್ತಿತ್ತು. ಬಂಧನವಾದ ಕೂಡಲೇ ಆತನನ್ನು ಎನ್​ಕೌಂಟರ್​ ಮಾಡುವಂತೆ ತೆಲಂಗಾಣ ಕಾರ್ಮಿಕ ಸಚಿವ ಮಲ್ಲ ರೆಡ್ಡಿ ಒತ್ತಾಯಿಸಿದ್ದರು. ಇದರ ನಡುವೆ ಆರೋಪಿಯ ಸುಳಿವು ನೀಡಿದವರಿಗೆ ಸೈಬರಾಬಾದ್​ ಪೊಲೀಸರು 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು. ಅಲ್ಲದೆ, ಆತನ ಫೋಟೋವನ್ನು ಸಹ ಬಿಡುಗಡೆ ಮಾಡಲಾಗಿತ್ತು. ಆದರೆ, ಇದೀಗ ಆರೋಪಿ ಭಯದಿಂದಲೋ? ಅಥವಾ ಪಾಪಪ್ರಜ್ಞೆಯಿಂದಲೋ ಆತ್ಮಹತ್ಯೆ ಹಾದಿ ಹಿಡಿದಿದ್ದಾನೆ.

ಅನೇಕ ರಾಜಕಾರಣಿಗಳು, ಕಾರ್ಯಕರ್ತರು ಮತ್ತು ಸಿನಿಮಾ ಕಲಾವಿದರು ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದರು.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ