Breaking News
Home / ಜಿಲ್ಲೆ / ಬೆಂಗಳೂರು / ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ

Spread the love

ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.

ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ವಿಕಾಸಸೌಧದಲ್ಲಿ ಸಚಿವ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಯವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ