Home / ರಾಜಕೀಯ / ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆಗೆ ಪೂರ್ಣಕುಂಭ ಸ್ವಾಗತ

ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆಗೆ ಪೂರ್ಣಕುಂಭ ಸ್ವಾಗತ

Spread the love

ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಪಡೆ ಗುರುವಾರ ಅರಣ್ಯಭವನದಿಂದ ಅರಮನೆ ಪ್ರವೇಶಿಸಿದ್ದು, ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.

ಅರಣ್ಯಭವನದಲ್ಲಿ ಅಭಿಮನ್ಯು, ಧನಂಜಯ, ಕಾವೇರಿ, ಚೈತ್ರಾ, ಅಶ್ವತ್ಥಾಮ, ಲಕ್ಷ್ಮೀ, ಗೋಪಾಲಸ್ವಾಮಿ ಹಾಗೂ ವಿಕ್ರಂ ಆನೆಗಳನ್ನು ಸಿಂಗರಿಸಿ ಗಜಪಡೆಗೆ ಪೂಜಾ ಕಾರ್ಯ ನೆರವೇರಿಸಲಾಯಿತು. ನಂತರ ವಾದ್ಯ ಮೇಳದೊಂದಿಗೆ ಗಜಪಡೆ ಅರಮನೆಯತ್ತ ಹೆಜ್ಜೆ ಹಾಕಿದವು.

ಅರಮನೆಯ ಜಯಮಾರ್ತಂಡ ದ್ವಾರದಲ್ಲಿ ಗಜಪಡೆಗೆ ಹೂಮಳೆಗರೆಯಲಾಯಿತು. ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಪೂಜೆ ನೆರವೇರಿಸಿ ಸ್ವಾಗತ ಕೋರಿದರು. ಇದೇ ವೇಳೆ ಕಬ್ಬು, ಬೆಲ್ಲ, ತೆಂಗಿನಕಾಯಿಯನ್ನು ಆನೆಗಳಿಗೆ ನೀಡಲಾಯಿತು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ