Breaking News

25,ಹಾಗೂ26 ರಂದು ಎರಡು ದಿನ ಬೆಳಗಾವಿಯಲ್ಲೇ ಇರುತ್ತೇನೆ,: ಬಸವರಾಜ ಬೊಮ್ಮಾಯಿ

Spread the love

ಬೆಳಗಾವಿ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 25,ಹಾಗೂ 26 ರಂದು ಎರಡು ದಿನ ಬೆಳಗಾವಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ,ಶಾಸಕರು ಸಿಎಂ ಬೊಮ್ಮಾಯಿ ಅವರನ್ನು ಅಭಿನಂದಿಸಲು ಬೆಂಗಳೂರಿಗೆ ಹೋದ ಸಂಧರ್ಭದಲ್ಲಿ 25,ಹಾಗೂ26 ರಂದು ಎರಡು ದಿನ ಬೆಳಗಾವಿಯಲ್ಲೇ ಇರುತ್ತೇನೆ,ಬೆಳಗಾವಿ ಅಭಿವೃದ್ಧಿಗೆ ಸಮಂಧಿಸಿದ. ವಿಚಾರವನ್ನು ಅಲ್ಲೇ ಚರ್ಚೆ ಮಾಡೋಣ ಎಂದು ಸಿಎಂ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಆದ ಬಳಿಕ ಎರಡನೇಯ ಬಾರಿಗೆ ಬೆಳಗಾವಿಗೆ ಬರುತ್ತಿರುವ ಬಸವರಾಜ ಬೊಮ್ಮಾಯಿ ಬೆಳಗಾವಿ ನಗರ ಹಾಗೂ ಜಿಲ್ಲೆಯ ಅಭಿವೃದ್ಧಿ ಕುರಿತು ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಹಲವು ನಿರ್ಧಾರಗಳನ್ನು ಬೆಳಗಾವಿಯಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬೆಳಗಾವಿ ನಗರದ ಜನತೆ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರು ಬೆಳಗಾವಿ ನಗರದ ಅಭಿವೃದ್ಧಿಯ ಕುರಿತು ಹಲವು ಮಹತ್ವದ ಯೋಜನೆಗಳನ್ನು ಘೋಷಿಸುವ ಎಲ್ಲ ಸಾಧ್ಯತೆಗಳಿದ್ದು,ಶಾಸಕ ಅಭಯ ಪಾಟೀಲ ಮತ್ತು ಅನೀಲ ಬೆನಕೆ,ನಗರದ ಅಭಿವೃದ್ಧಿಗಾಗಿ ಸಿಎಂ ಬಳಿ ಯಾವ ಯೋಜನೆಗಳನ್ನು ಪ್ರಸ್ತಾಪ ಮಾಡಬೇಕು ಎನ್ನುವದರ ಬಗ್ಗೆ ಪಟ್ಟಿ ಸಿದ್ಧಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿಯ ಹೈಟೆಕ್ ಬಸ್ ನಿಲ್ಧಾಣದ ಕಾಮಗಾರಿ,ಹಾಗೂ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಾಣದ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವದು,ಜೊತೆಗೆ ಬೆಳಗಾವಿ ನಗರದಲ್ಲಿರುವ ಆಕ್ರಮ ಮನೆಗಳನ್ನು ಸಕ್ರಮಗೊಳಿಸುವ ವಿಚಾರಗಳು ಸಿಎಂ ಬಳಿ ಚರ್ಚೆಗೆ ಬರಲಿವೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸದಿದ್ದರೆ ಶುಕ್ರವಾರ ರಾಜ್ಯಾದ್ಯಂತ ಹೆದ್ದಾರಿ ಬಂದ್

Spread the loveಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ