ದಾವಣಗೆರೆ : ರಾಜ್ಯದಲ್ಲಿ ನನ್ನ ಪ್ರವಾಸ ಆರಂಭವಾಗಿದ್ದು ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 ರಿಂದ 140 ಸೀಟ್ ಗೆದ್ದು ಅಧಿಕಾರಕ್ಕೆ ಮತ್ತೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಠಿಯಿಂದ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ದಾವಣಗೆರೆಗೆ ಬಂದಿದ್ದ ಬಿಎಸ್ ವೈ ನನ್ನ ಪ್ರವಾಸ ಈಗಾಗಲೇ ಪ್ರಾರಂಭವಾಗಿದೆ, ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 -140 ಸೀಟ್ ಗೆದ್ದು ಅಧಿಕಾರಕ್ಕೆ ಮತ್ತೆ ಬರುತ್ತೇವೆ. ಮೈಸೂರು ಭಾಗಕ್ಕೆ ಹೋಗಿ ಬಂದಿದ್ದೇನೆ. ನಿರಂತರವಾಗಿ ಓಡಾಡುತ್ತಿದ್ದೇನೆ ಯಾವುದೇ ಸಮಸ್ಯೆ ಇಲ್ಲ, ರಾಜ್ಯದಲ್ಲಿ ನಾನೇ ಅಗಲಿ, ರಾಜ್ಯಾಧ್ಯಕ್ಷ ರಾಗಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಬಲಿಷ್ಠ ಗೊಳಿಸುತ್ತೇವೆ ಎಂದರು.
ಮುಂದಿನ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಇಂದಿನಿಂದಲೇ ಸಿದ್ಧತೆಗಳನ್ನು ನಡೆಸುತ್ತೇವೆ ಅಲ್ಲದೆ ಇಂದಿನ ಕಾರ್ಯಕಾರಿಣಿಯಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಲಿದ್ದೇವೆ, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಕೂಡ ಬಂದಿದ್ದಾರೆ ಎಂದರು.