Breaking News

ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪನವರ ಅಧಿಕಾರ ಹೋಗಿದೆ: ವಿಜಯಾನಂದ ಕಾಶಪ್ಪನವರ್

Spread the love

ಕೊಪ್ಪಳ: ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಮಾಜಿ ಸಿಎಂ ಯಡಿಯೂರಪ್ಪ ಅಧಿಕಾರ ಹೋಗಿದೆ ಎಂದು ಕೊಪ್ಪಳದಲ್ಲಿ ಪಂಚಮಸಾಲಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.

 

ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡ ಬಗ್ಗೆ ಮಾತನಾಡಿದ ಅವರು, ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪ ಅವರ ಅಧಿಕಾರ ಹೋಗಿದೆ. ಮೀಸಲಾತಿ ಕೊಡ್ತೀನಿ ಎಂದು ಯಡಿಯೂರಪ್ಪ ಅವರು ಮೀಸಲಾತಿ ಕೊಡಲಿಲ್ಲ. ಅದೇ ಕಾರಣಕ್ಕಾಗಿಯೇ ಅವರ ಅಧಿಕಾರ ಹೋಯ್ತು. ಸ್ವಾಮೀಜಿ ಅವರ ಶಾಪವೇ ಯಡಿಯೂರಪ್ಪ ಅವರಿಗೆ ತಟ್ಟಿದೆ ಎಂದು ಹರಿಹಾಯ್ದಿದ್ದಾರೆ.ಸ್ವಾಮೀಜಿಯನ್ನು 712 ಕಿಲೋ ಮೀಟರ್ ನಡೆಸೋ ಅವಶ್ಯಕತೆ ಇತ್ತಾ? ಮೀಸಲಾತಿ ಕೊಡ್ತೀನಿ ಎಂದು ಸುವರ್ಣ ಸೌಧದ ಮುಂದೆ ಮಾತು ಕೊಟ್ಟಿದ್ರು. ಮೀಸಲಾತಿ ಕೊಡಲಾರದಿದ್ದಕ್ಕೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು. ಬಸನಗೌಡ ಪಾಟೀಲ್ ಯತ್ನಾಳ್ ಮೀಸಲಾತಿಗಾಗಿಯೇ ಯಡಿಯೂರಪ್ಪ ಅವರನ್ನು ಬೈದಿದ್ದು. ಅದು ಬಿಟ್ಟು ಯಾವುದೇ ವೈಯಕ್ತಿಕ ಕಾರಣಕ್ಕೆ ಅಲ್ಲ ಎಂದು ಸಮರ್ಥಿಸಿಕೊಂಡರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ