Breaking News

ವಿದ್ಯುತ್ ತಗುಲಿ ತಂದೆ ಮಗ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ನಡೆದಿದೆ. 

Spread the love

ರಾಯಚೂರು:  ವಿದ್ಯುತ್ ತಗುಲಿ ತಂದೆ ಮಗ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಯಚೂರಿನ ದಿನ್ನಿ ಗ್ರಾಮದಲ್ಲಿ ನಡೆದಿದೆ.  ಮಹೇಶ (47), ನವೀನ್ (16) ಮೃತರು.

ಮನೆ ಪಕ್ಕದಲ್ಲಿದ್ದ ಮರಕ್ಕೆ ವಿದ್ಯುತ್ ವೈರ್ ತಾಕಿದೆ. ಇದೇ ಮರಕ್ಕೆ ಬಟ್ಟೆ ನೇತಾಕಲು ವೈರ್ ಕಟ್ಟಲಾಗಿತ್ತು. ಜಿಟಿ ಜಿಟಿ ಮಳೆ ಸುರಿಯುತ್ತಿರುವ ಪರಿಣಾಮ ಮರಕ್ಕೆ ವಿದ್ಯುತ್ ಪ್ರವಹಿಸಿ ತಂತಿಗೂ ಅರ್ಥಿಂಗ್ ಆಗಿದೆ. ಬಟ್ಟೆ ತೆಗೆಯಲು ಹೋದ ತಂದೆ ಶಾಕ್ ನಿಂದ ಮೃತಪಟ್ಟಿದ್ದಾನೆ. ತಂದೆ ಕೆಳಗೆ ಬಿದ್ದಿರುವುದನ್ನು ಗಮನಿಸಿದ ಮಗ ಎಬ್ಬಿಸಲು ಹೋದಾಗ ಮಗನಿಗೂ ಶಾಕ್ ತಗುಲಿದೆ.

ಈ ಸಂಬಂಧ ಯರಗೇರಾ ಠಾಣೆಯಲ್ಲಿ ದೂರು ದಾಖಲಾಗಿದೆ. 


Spread the love

About Laxminews 24x7

Check Also

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

Spread the loveರಾಯಚೂರು: ಕೇತುಗ್ರಸ್ಥ ಚಂದ್ರಗ್ರಹಣ  ನಡುವೆಯೂ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ