ಬೆಳಗಾವಿ: ನಗರದಲ್ಲಿ ನಡೆಯುತ್ತಿರುವ ಶ್ರೀ ಗಣೇಶೋತ್ಸವ ಮೆರವಣಿಗೆ ವೇಳೆ ಗಣಪತಿ ವಿಸರ್ಜನೆ ಮಾಡಲು ಗಣೇಶ ಮಂಡಳಿಯವರು ವಿಳಂಬ ಮಾಡಿದ್ದಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ ಘಟನೆ ರವಿವಾರ ರಾತ್ರಿ ಕಪಿಲೇಶ್ವರ ಬ್ರಿಡ್ಜ್ ಬಳಿ ನಡೆದಿದೆ.
ರಾತ್ರಿ 9 ಗಂಟೆ ನಂತರ ಕರ್ಫ್ಯೂ ಆದೇಶಿಸಿದ್ದರೂ ಸಾರ್ವಜನಿಕ ಗಣೇಶ ಮಂಡಳಿಯವರು ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದರು.
ರಾತ್ರಿ 12 ಗಂಟೆವರೆಗೂ ಕಪಿಲೇಶ್ವರ್ ಹೊಂಡದ ಸುತ್ತಲೂ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ರಾತ್ರಿ ಆಗುತ್ತಿದ್ದಂತೆ ಈ ಪ್ರದೇಶದಲ್ಲಿ ಜನಸಾಗರವೇ ಹರಿದು ಬಂದಿತ್ತು. ಗಣೇಶ ಮೂರ್ತಿ ನೋಡಲು ಜನ ಆಗಮಿಸಿದ್ದರು. ರಾತ್ರಿ 12:30ರ ಬಳಿಕ ಖಡಕ್ ಗಲ್ಲಿಯ ಗಣಪತಿ ವಿಸರ್ಜನೆ ಆಯಿತು. ಹಲವು ವರ್ಷಗಳಿಂದ ಈ ಗಣಪತಿಯೇ ಕಿನೆಯದಾಗಿ ವಿಸರ್ಜನೆ ಆಗುತ್ತಿತ್ತು. ಮರುಉನ ಮಧ್ಯಾಹ್ನ ವಿಸರ್ಜನೆ ಆಗುತ್ತಿತ್ತು. ಈ ಸಲ ಅತಿ ಬೇಗವಾಗಿದೆ. ಇನ್ನೂ 15ಕ್ಕೂ ಹೆಚ್ಚು ಮೂರ್ತಿಗಳು ವಿಸರ್ಜನೆ ಆಗಬೇಕಿವೆ. ಪೊಲೀಸರು ಬೇಗ ಮುಗಿಸುವಂತೆ ಮಂಡಳಿಯವರಿಗೆ ಹೇಳುತ್ತಿದ್ದಾರೆ.