Breaking News

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

Spread the love

ಬೆಳಗಾವಿ: ನಗರದಲ್ಲಿ ನಡೆಯುತ್ತಿರುವ ಶ್ರೀ ಗಣೇಶೋತ್ಸವ ಮೆರವಣಿಗೆ ವೇಳೆ ಗಣಪತಿ ವಿಸರ್ಜನೆ ಮಾಡಲು ಗಣೇಶ ಮಂಡಳಿಯವರು ವಿಳಂಬ ಮಾಡಿದ್ದಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ ಘಟನೆ ರವಿವಾರ ರಾತ್ರಿ ಕಪಿಲೇಶ್ವರ ಬ್ರಿಡ್ಜ್ ಬಳಿ ನಡೆದಿದೆ.

ರಾತ್ರಿ 9 ಗಂಟೆ ನಂತರ ಕರ್ಫ್ಯೂ ಆದೇಶಿಸಿದ್ದರೂ ಸಾರ್ವಜನಿಕ ಗಣೇಶ ಮಂಡಳಿಯವರು ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದರು.

ರಾತ್ರಿ 12 ಗಂಟೆವರೆಗೂ ಕಪಿಲೇಶ್ವರ್ ಹೊಂಡದ ಸುತ್ತಲೂ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ರಾತ್ರಿ ಆಗುತ್ತಿದ್ದಂತೆ ಈ ಪ್ರದೇಶದಲ್ಲಿ ಜನಸಾಗರವೇ ಹರಿದು ಬಂದಿತ್ತು. ಗಣೇಶ ಮೂರ್ತಿ ನೋಡಲು ಜನ ಆಗಮಿಸಿದ್ದರು. ರಾತ್ರಿ 12:30ರ ಬಳಿಕ ಖಡಕ್ ಗಲ್ಲಿಯ ಗಣಪತಿ ವಿಸರ್ಜನೆ ಆಯಿತು. ಹಲವು ವರ್ಷಗಳಿಂದ ಈ ಗಣಪತಿಯೇ ಕಿನೆಯದಾಗಿ ವಿಸರ್ಜನೆ ಆಗುತ್ತಿತ್ತು. ಮರು‌ಉನ ಮಧ್ಯಾಹ್ನ ವಿಸರ್ಜನೆ ಆಗುತ್ತಿತ್ತು.‌ ಈ ಸಲ ಅತಿ ಬೇಗವಾಗಿದೆ.‌ ಇನ್ನೂ 15ಕ್ಕೂ ಹೆಚ್ಚು ಮೂರ್ತಿಗಳು ವಿಸರ್ಜನೆ ಆಗಬೇಕಿವೆ. ಪೊಲೀಸರು ಬೇಗ ಮುಗಿಸುವಂತೆ ಮಂಡಳಿಯವರಿಗೆ ಹೇಳುತ್ತಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ