Breaking News

ಸರ್ಕಾರಿ ಕಚೇರಿಗೆ ನುಗ್ಗಿ ಹಿರಿಯ ಕೆಎಎಸ್​ ಅಧಿಕಾರಿಗೆ ಕೊಲೆ ಬೆದರಿಕೆ ಆರೋಪ

Spread the love

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿರುವ ಕೆಎಎಸ್ ಅಧಿಕಾರಿ ಬಿ.ಕೆ.ನಾಗರಾಜಪ್ಪ ಅವರ ಮೇಲೆ ಕೊಲೆ ಬೆದರಿಕೆ ಕೇಳಿ ಬಂದಿದ್ದು ಸರ್ಕಾರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಮಹಾಲಕ್ಷ್ಮಿ ಲೇಔಟ್ ನ ಭೋವಿ ಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಹಣ ಮಂಜೂರಾತಿ ಮಾಡುವಂತೆ ಧಮ್ಕಿ ಹಾಕಿರೋ ಆರೋಪಿಗಳು. ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು. ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ ದೊಂಬಿ ಎಬ್ಬಿಸಿ ಕಚೇರಿಗೆ ಬೆಂಕಿ ಇಟ್ಟು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 

ಸದ್ಯ ಆರೋಪಿಗಳಾದ ಟಿ. ಕುಮಾರ್ ಹಾಗೂ ಇತರರ ವಿರುದ್ದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೆಎಎಸ್​ ಅಧಿಕಾರಿ ದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ