Breaking News
Home / ಜಿಲ್ಲೆ / ಬೆಂಗಳೂರು / ಸರ್ಕಾರಿ ಕಚೇರಿಗೆ ನುಗ್ಗಿ ಹಿರಿಯ ಕೆಎಎಸ್​ ಅಧಿಕಾರಿಗೆ ಕೊಲೆ ಬೆದರಿಕೆ ಆರೋಪ

ಸರ್ಕಾರಿ ಕಚೇರಿಗೆ ನುಗ್ಗಿ ಹಿರಿಯ ಕೆಎಎಸ್​ ಅಧಿಕಾರಿಗೆ ಕೊಲೆ ಬೆದರಿಕೆ ಆರೋಪ

Spread the love

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿರುವ ಕೆಎಎಸ್ ಅಧಿಕಾರಿ ಬಿ.ಕೆ.ನಾಗರಾಜಪ್ಪ ಅವರ ಮೇಲೆ ಕೊಲೆ ಬೆದರಿಕೆ ಕೇಳಿ ಬಂದಿದ್ದು ಸರ್ಕಾರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಮಹಾಲಕ್ಷ್ಮಿ ಲೇಔಟ್ ನ ಭೋವಿ ಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಹಣ ಮಂಜೂರಾತಿ ಮಾಡುವಂತೆ ಧಮ್ಕಿ ಹಾಕಿರೋ ಆರೋಪಿಗಳು. ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು. ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ ದೊಂಬಿ ಎಬ್ಬಿಸಿ ಕಚೇರಿಗೆ ಬೆಂಕಿ ಇಟ್ಟು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 

ಸದ್ಯ ಆರೋಪಿಗಳಾದ ಟಿ. ಕುಮಾರ್ ಹಾಗೂ ಇತರರ ವಿರುದ್ದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೆಎಎಸ್​ ಅಧಿಕಾರಿ ದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ