Breaking News

ಕಳ್ಳತನದ ಮೂಲಕ ಆತಂಕ ಸೃಷ್ಟಿಸಿದ್ದ ಫೈರೋಜ್ ಜಫ್ರಿ ಬಂಧನ

Spread the love

 

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳ್ಳತನದ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಿದ್ದ ಖತರ್ನಾಕ್ ಕಳ್ಳ ಫೈರೋಜ್ ಜಫ್ರಿ ಕಳ್ಳನನ್ನು ಬಂಧಿಸುವಲ್ಲಿ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಫೈರೋಜ್ ಜಫ್ರಿ ರಾಜೇಸಾಬ(38) ಬಂಧಿತ ಆರೋಪಿ. ರಾತ್ರಿ ವೇಳೆ ಮಾರುಕಟ್ಟೆಯಲ್ಲಿ ಶಟರ್ ಮುರಿದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸಿರುವ ಪೊಲೀಸರು, ಆತನಿಂದ 30,300 ರೂ ನಗದು, ಕಬ್ಬಿಣದ ರಾಡ್ ವಶಪಡಿಸಿಕೊಂಡಿದ್ದಾರೆ.

ಲಬ್ ರಸ್ತೆ ವಿನಾಯಕ ಮೆಡಿಕಲ್ ಶಾಪ್ ಹಾಗೂ ಮಂತ್ರಾ ಹೊಟೇಲ್ ಬಳಿ ಇರುವ ಸಸ್ಯಹಾರಿ ಹೊಟೇಲ್ ಶಟರ್ ಮುರಿದು ಕಳ್ಳತನ ಮಾಡಿದ ಕುರಿತು ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಬೇಧಿಸುವಲ್ಲಿ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ