Breaking News

ಗೌರಿ ಲಂಕೇಶ್ ಹತ್ಯೆ, ಮೇಲ್ಮನವಿ ತೀರ್ಪು ಕಾಯ್ದಿರಿಕೆ

Spread the love

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ವಿರುದ್ದ ಸಂಘಟಿತ ಅಪರಾಧ ಪ್ರಕರಣವನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಗೌರಿ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (ಕೋಕಾ) 2000ರ ಅಡಿ ಆರೋಪಿ ಮೋಹನ್ ನಾಯಕ್ ವಿರುದ್ಧ ದಾಖಲಿಸಿದ್ದ ಆರೋಪಗಳನ್ನು ಕೈಬಿಟ್ಟಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ತ್ರಿಸದಸ್ಯ ಪೀಠ ನಡೆಸಿತು.

ಕೋಕಾ ಕಾಯಿದೆಯ ಸೆಕ್ಷನ್ 24ರಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗಿಂತ ಕೆಳಗಿನ ದರ್ಜೆಯಲ್ಲಿಲ್ಲದ ಅಧಿಕಾರಿಗಳಿಂದ ಹಿಂದೆ ಅನುಮತಿ ಇಲ್ಲದೇ ಯಾವುದೇ ಕಾರಣಕ್ಕೂ ವಿಶೇಷ ನ್ಯಾಯಾಲಯವು ಅಪರಾಧದವನ್ನು ಪರಿಗಣಿಸಬಾರದು ಎಂದು ಹೇಳಲಾಗಿದೆ. ಇಲ್ಲಿ ಕಾಯಿದೆಯ ಸೆಕ್ಷನ್ 24 ಅನ್ನು ಪರಿಗಣಿಸದೇ ಹೈಕೋರ್ಟ್ ಲೋಪ ಎಸಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ